ಮಂಡ್ಯ

ಶ್ರೀರಂಗಪಟ್ಟಣ | ಬಿರುಗಾಳಿ ಸಹಿತ ಸುರಿದ ಮಳೆಗೆ ನೆಲಕಚ್ಚಿದ ಬಾಳೆ

ಶ್ರೀರಂಗಪಟ್ಟಣ: ಮಂಗಳವಾರ ರಾತ್ರಿ ತಾಲೂಕಿನಾದ್ಯಂತ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಬೃಹತ್ ಗಾತ್ರದ ಮರಗಳು, ವಿದ್ಯುತ್ ಕಂಬಗಳು ಸೇರಿದಂತೆ ಬಾಳೆ ತೋಟ ಸಂಪೂರ್ಣವಾಗಿ ಧರೆಗುಳಿರುವ ಘಟನೆ ನಡೆದಿದೆ.

ತಾಲೂಕಿನ ಕಾರೇಕುರ ಗೇಟ್ ಹಾಗೂ ಪಂಪ್‌ಹೌಸ್ ಬಳಿ ಪ್ರತ್ಯೇಕವಾಗಿ ಎರಡು ಬೃಹತ್ ಗಾತ್ರದ ನೀಲಗಿರಿ ಮರಗಳು ಮಂಗಳವಾರ ರಾತ್ರಿ 9 ಗಂಟೆ ಸಮಯದಲ್ಲಿ ನೆಲಕ್ಕುರುಳಿದ್ದು, ಇದರಿಂದ ಪಶ್ಚಿಮವಾಹಿನಿ- ಕೆಆರ್‌ಎಸ್ ರಸ್ತೆ ಸಂಪೂರ್ಣವಾಗಿ ಅಸ್ಥವೆಸ್ತಗೊಂಡಿತ್ತು. ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಹೆದ್ದಾರಿಯಲ್ಲಿ ಬಿದಿದ್ದ ಮರಗಳನ್ನು ತೆರವುಗಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಬಾಳೆ ತೋಟ ನಾಶ
ತಾಲೂಕಿನ ಅರಕೆರೆ ಗ್ರಾಮದ ಕೆ.ರಾಜು ಎಂಬುವವರಿಗೆ ಸೇರಿದ್ದ ಸುಮಾರು 2.3 ಎಕರೆಯಲ್ಲಿ ಬೆಳೆದಿದ್ದ ಬಾಳೆ ತೋಟೆ ಬಿರುಗಾಳಿಯಿಂದಾಗಿ ಸಂಪೂರ್ಣವಾಗಿ ನೆಲಕಚ್ಚಿದೆ. ಇದರಿಂದ ಫಸಲು ಕೈಗೆ ಸಿಗುವ ವೇಳೆ ಇಂತಹ ಘಟನೆ ಸಂಬಭವಿಸಿದ್ದು ರೈತ ಕಂಗಾಲಾಗಿದ್ದಾರೆ.

ಹಾರಿದ ಕಲ್ನಾರ್ ಶೀಟ್
ತಾಲೂಕಿನ ಮಹದೇವಪುರ ಗ್ರಾಮದ ಪುಟ್ಟಸ್ವಾಮಿ ಎಂಬುವವರ ಮನೆ ಮೇಲಿನ ಸೀಟ್‌ಗಳು ಸಂಪೂರ್ಣವಾಗಿ ಹಾರಿ ಹೋಗಿದ್ದು, ಪುಟ್ಟಸ್ವಾಮಿ ಕಂಗಾಲಾಗಿದ್ದಾರೆ.
ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಮಾತನಾಡಿ, ತಾಲೂಕಿನಾದ್ಯಂತ ಬಾರಿ ಮಳೆಯಿಂದಾಗಿ ರೈತರ ಬೆಳೆಗಳು ಸೇರಿದಂತೆ ಅನೇಕ ಮನೆಗಳು ಅನಾಹುತ ಸಂಬವಿಸಿರುವುದು ಕಂಡುಬಂದಿದೆ. ಹಾನಿಯಾಗಿರುವ ಬಗ್ಗೆ ಸೂಕ್ತ ಮಾಹಿತಿಯೊಂದಿಗೆ ಅರ್ಜಿ ನೀಡುವಂತೆ ತಿಳಿಸಲಾಗಿದೆ. ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸೂಕ್ತ ಪರಿಹಾರ ನೀಡಲು ಕ್ರಮ ವಹಿಸಲಾಗುವುದು ಎಂದಿದ್ದಾರೆ

ಆಂದೋಲನ ಡೆಸ್ಕ್

Recent Posts

ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಮುರ್ಮು ಅಂಕಿತ

ನವದೆಹಲಿ : ಹೋರಾಟಗಾರರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್‌ಜೆಂಡರ್) ಹಕ್ಕುಗಳ ರಕ್ಷಣೆ ಕುರಿತ-2019ರ…

5 mins ago

ಕೃಷಿ ಸಚಿವರ ಕಛೇರಿಯಲ್ಲಿ ಈ ವರ್ಷವೂ ಶೇ.100ರಷ್ಟು ಕಡತ ವಿಲೇವಾರಿ ಸಾಧನೆ

ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕಚೇರಿಯೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಅಳವಡಿಸಿಕೊಂಡ ಹಿನ್ನಲೆ ಈ ವರ್ಷವೂ ಕಡತ…

1 hour ago

ಜನಗಣತಿ | ಲಿವ್‌-ಇನ್‌ ಸಂಬಂಧದಲ್ಲಿರುವವರ ಪರಿಗಣನೆ ಹೇಗೆ? ಕೇಂದ್ರ ಸರ್ಕಾರ ಹೇಳಿದ್ದೇನು?

ನವದೆಹಲಿ : 2027ರ ಜನಗಣತಿಯಲ್ಲಿ ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ತಮ್ಮದು ಶಾಶ್ವತ ಸಂಬಂಧ ಎಂದು ಪರಿಗಣಿಸಿದರೆ, ಅವರನ್ನು ಜನಗಣತಿ ವೇಳೆ…

1 hour ago

ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು.…

3 hours ago

ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಚುನಾವಣಾ ಪ್ರಚಾರದ…

3 hours ago

ಉಪಚುನಾವಣೆಯಲ್ಲಿ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ಕಾಂಗ್ರೆಸ್‌ಗೆ ನೆರವಾಗಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ದಾವಣಗೆರೆ: ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago