ಮಂಡ್ಯ

ಶ್ರೀರಂಗಪಟ್ಟಣ | ಬಿರುಗಾಳಿ ಸಹಿತ ಸುರಿದ ಮಳೆಗೆ ನೆಲಕಚ್ಚಿದ ಬಾಳೆ

ಶ್ರೀರಂಗಪಟ್ಟಣ: ಮಂಗಳವಾರ ರಾತ್ರಿ ತಾಲೂಕಿನಾದ್ಯಂತ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಬೃಹತ್ ಗಾತ್ರದ ಮರಗಳು, ವಿದ್ಯುತ್ ಕಂಬಗಳು ಸೇರಿದಂತೆ ಬಾಳೆ ತೋಟ ಸಂಪೂರ್ಣವಾಗಿ ಧರೆಗುಳಿರುವ ಘಟನೆ ನಡೆದಿದೆ.

ತಾಲೂಕಿನ ಕಾರೇಕುರ ಗೇಟ್ ಹಾಗೂ ಪಂಪ್‌ಹೌಸ್ ಬಳಿ ಪ್ರತ್ಯೇಕವಾಗಿ ಎರಡು ಬೃಹತ್ ಗಾತ್ರದ ನೀಲಗಿರಿ ಮರಗಳು ಮಂಗಳವಾರ ರಾತ್ರಿ 9 ಗಂಟೆ ಸಮಯದಲ್ಲಿ ನೆಲಕ್ಕುರುಳಿದ್ದು, ಇದರಿಂದ ಪಶ್ಚಿಮವಾಹಿನಿ- ಕೆಆರ್‌ಎಸ್ ರಸ್ತೆ ಸಂಪೂರ್ಣವಾಗಿ ಅಸ್ಥವೆಸ್ತಗೊಂಡಿತ್ತು. ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಹೆದ್ದಾರಿಯಲ್ಲಿ ಬಿದಿದ್ದ ಮರಗಳನ್ನು ತೆರವುಗಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಬಾಳೆ ತೋಟ ನಾಶ
ತಾಲೂಕಿನ ಅರಕೆರೆ ಗ್ರಾಮದ ಕೆ.ರಾಜು ಎಂಬುವವರಿಗೆ ಸೇರಿದ್ದ ಸುಮಾರು 2.3 ಎಕರೆಯಲ್ಲಿ ಬೆಳೆದಿದ್ದ ಬಾಳೆ ತೋಟೆ ಬಿರುಗಾಳಿಯಿಂದಾಗಿ ಸಂಪೂರ್ಣವಾಗಿ ನೆಲಕಚ್ಚಿದೆ. ಇದರಿಂದ ಫಸಲು ಕೈಗೆ ಸಿಗುವ ವೇಳೆ ಇಂತಹ ಘಟನೆ ಸಂಬಭವಿಸಿದ್ದು ರೈತ ಕಂಗಾಲಾಗಿದ್ದಾರೆ.

ಹಾರಿದ ಕಲ್ನಾರ್ ಶೀಟ್
ತಾಲೂಕಿನ ಮಹದೇವಪುರ ಗ್ರಾಮದ ಪುಟ್ಟಸ್ವಾಮಿ ಎಂಬುವವರ ಮನೆ ಮೇಲಿನ ಸೀಟ್‌ಗಳು ಸಂಪೂರ್ಣವಾಗಿ ಹಾರಿ ಹೋಗಿದ್ದು, ಪುಟ್ಟಸ್ವಾಮಿ ಕಂಗಾಲಾಗಿದ್ದಾರೆ.
ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಮಾತನಾಡಿ, ತಾಲೂಕಿನಾದ್ಯಂತ ಬಾರಿ ಮಳೆಯಿಂದಾಗಿ ರೈತರ ಬೆಳೆಗಳು ಸೇರಿದಂತೆ ಅನೇಕ ಮನೆಗಳು ಅನಾಹುತ ಸಂಬವಿಸಿರುವುದು ಕಂಡುಬಂದಿದೆ. ಹಾನಿಯಾಗಿರುವ ಬಗ್ಗೆ ಸೂಕ್ತ ಮಾಹಿತಿಯೊಂದಿಗೆ ಅರ್ಜಿ ನೀಡುವಂತೆ ತಿಳಿಸಲಾಗಿದೆ. ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸೂಕ್ತ ಪರಿಹಾರ ನೀಡಲು ಕ್ರಮ ವಹಿಸಲಾಗುವುದು ಎಂದಿದ್ದಾರೆ

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

1 hour ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

2 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

3 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

3 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

8 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

8 hours ago