ಮಂಡ್ಯ

ಕೊಡಗಿನಲ್ಲಿ ಧಾರಾಕಾರ ಮಳೆ; ಕೆಆರ್‌ಎಸ್‌ ಭರ್ತಿಗೆ ಕೇವಲ 5 ಅಡಿ ಬಾಕಿ

ಮಂಡ್ಯ: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಭರ್ತಿಯತ್ತ ಸಾಗುತ್ತಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.

ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಡಲಾಗಿದೆ.

ಈ ಬೆನ್ನಲ್ಲೇ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಭರ್ತಿಯತ್ತ ಸಾಗಿದ್ದು, ಅನ್ನದಾತರು ಈ ಬಾರಿ ಉತ್ತಮ ಬೆಳೆ ಬೆಳೆಯಬಹುದು ಎಂದು ಅಂದಾಜಿಸಿದ್ದಾರೆ.

ಕೆಆರ್‌ಎಸ್‌ ಜಲಾಶಯದ ಒಳಹರಿವು 51,375 ಕ್ಯೂಸೆಕ್ಸ್‌ಗಳಾಗಿದ್ದು, ಹೊರಹರಿವನ್ನು ಕಾಲುವೆ ಹಾಗೂ ನದಿ ಸೇರಿದಂತೆ 10,000 ಕ್ಯೂಸೆಕ್ಸ್‌ಗೆ ಏರಿಕೆ ಮಾಡಲಾಗಿದೆ.

124 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್‌ ಜಲಾಶಯದ ಭರ್ತಿಗೆ ಇನ್ನು ಕೇವಲ 5 ಅಡಿ ಬಾಕಿಯಿದ್ದು, ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡಲಾಗುತ್ತದೆ.

ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟರಂತೂ ಕಾವೇರಿ ನದಿ ತನ್ನ ರೌದ್ರಾವತಾರ ತಾಳಲಿದ್ದು, ನದಿ ಪಾತ್ರದ ತಗ್ಗು ಪ್ರದೇಶಗಳು ಸಂಪೂರ್ಣ ಮುಳುಗಡೆಯಾಗಲಿವೆ.

ಈ ಹಿನ್ನೆಲೆಯಲ್ಲಿ ನದಿ ಪಾತ್ರದ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಜಾನುವಾರುಗಳನ್ನು ಸಹ ಸುರಕ್ಷಿತ ಸ್ಥಳಕ್ಕೆ ರವಾನಿಸಬೇಕು ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

8 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

8 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

9 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

9 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

9 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

9 hours ago