ಮಂಡ್ಯ: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯ ಭರ್ತಿಯತ್ತ ಸಾಗುತ್ತಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.
ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಡಲಾಗಿದೆ.
ಈ ಬೆನ್ನಲ್ಲೇ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯ ಭರ್ತಿಯತ್ತ ಸಾಗಿದ್ದು, ಅನ್ನದಾತರು ಈ ಬಾರಿ ಉತ್ತಮ ಬೆಳೆ ಬೆಳೆಯಬಹುದು ಎಂದು ಅಂದಾಜಿಸಿದ್ದಾರೆ.
ಕೆಆರ್ಎಸ್ ಜಲಾಶಯದ ಒಳಹರಿವು 51,375 ಕ್ಯೂಸೆಕ್ಸ್ಗಳಾಗಿದ್ದು, ಹೊರಹರಿವನ್ನು ಕಾಲುವೆ ಹಾಗೂ ನದಿ ಸೇರಿದಂತೆ 10,000 ಕ್ಯೂಸೆಕ್ಸ್ಗೆ ಏರಿಕೆ ಮಾಡಲಾಗಿದೆ.
124 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್ಎಸ್ ಜಲಾಶಯದ ಭರ್ತಿಗೆ ಇನ್ನು ಕೇವಲ 5 ಅಡಿ ಬಾಕಿಯಿದ್ದು, ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡಲಾಗುತ್ತದೆ.
ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟರಂತೂ ಕಾವೇರಿ ನದಿ ತನ್ನ ರೌದ್ರಾವತಾರ ತಾಳಲಿದ್ದು, ನದಿ ಪಾತ್ರದ ತಗ್ಗು ಪ್ರದೇಶಗಳು ಸಂಪೂರ್ಣ ಮುಳುಗಡೆಯಾಗಲಿವೆ.
ಈ ಹಿನ್ನೆಲೆಯಲ್ಲಿ ನದಿ ಪಾತ್ರದ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಜಾನುವಾರುಗಳನ್ನು ಸಹ ಸುರಕ್ಷಿತ ಸ್ಥಳಕ್ಕೆ ರವಾನಿಸಬೇಕು ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…