Mysore
27
broken clouds

Social Media

ಮಂಗಳವಾರ, 21 ಏಪ್ರಿಲ 2026
Light
Dark

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ

krs damm

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡುಬಂದಿದೆ.

ಜಲಾಶಯದಲ್ಲಿ ಮೂರೇ ದಿನದಲ್ಲಿ 9 ಅಡಿ ನೀರು ಏರಿಕೆಯಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆ ಮಾಡಿದೆ.

ಇದನ್ನೂ ಓದಿ:- ಬೆಳಗಾವಿಯಲ್ಲಿ ಕೊರೊನಾ ಸೋಂಕಿತ 70 ವರ್ಷದ ವೃದ್ಧ ಸಾವು

ರೈತರ ಜೀವನಾಡಿಯಾಗಿರುವ ಕೆಆರ್‌ಎಸ್‌ ಜಲಾಶಯದ ಇಂದಿನ ಒಳಹರಿವು 22 ಸಾವಿರ ಕ್ಯೂಸೆಕ್ಸ್‌ಗಳಾಗಿದ್ದು, ಇಂದಿನ ಹೊರಹರಿವು 630 ಕ್ಯೂಸೆಕ್ಸ್‌ಗಳಾಗಿದೆ. 49.452 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿಂದು 21.282 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 98 ಅಡಿಗಳಾಗಿದೆ. ನಾಳೆ ವೇಳೆಗೆ ಜಲಾಶಯದ ನೀರಿನ ಮಟ್ಟ 100 ಅಡಿ ತಲುಪುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

Tags:
error: Content is protected !!