KRS | Large Volume of Water Released into Cauvery River: Advisory Issued for Precaution
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿದಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ.
ಕಳೆದ ಕೆಲ ದಿನಗಳಿಂದ ಕೊಂಚ ಕಡಿಮೆಯಾಗಿದ್ದ ವರುಣ ಮತ್ತೆ ತನ್ನ ಆರ್ಭಟ ಶುರುಮಾಡಿದ್ದು, ನಿನ್ನೆಯಿಂದ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳ ಕಂಡುಬಂದಿದ್ದು, ಜಲಾಶಯದ ಹೊರಹರಿವಿನಲ್ಲೂ ಏರಿಕೆ ಮಾಡಲಾಗಿದೆ.
ಜಲಾಶಯದ ಇಂದಿನ ಒಳಹರಿವು 70,072 ಕ್ಯೂಸೆಕ್ಸ್ಗಳಾಗಿದ್ದು, ಜಲಾಶಯದ ಹೊರಹರಿವು 1,01,268 ಕ್ಯೂಸೆಕ್ಸ್ಗೆ ಏರಿಕೆ ಮಾಡಲಾಗಿದೆ.
ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 124.54 ಅಡಿಗಳಾಗಿದೆ. 49.452 ಟಿಎಂಸಿ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿಂದು 48.824 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ.
ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಟ್ಟಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಭೀತಿ ಸೃಷ್ಟಿಯಾಗಿದ್ದು, ಜನರು ಎಚ್ಚರಿಕೆಯ ಇರುವಂತೆ ಸೂಚನೆ ನೀಡಲಾಗಿದೆ.
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…