ಮಂಡ್ಯ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿದಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ.

ಕಳೆದ ಕೆಲ ದಿನಗಳಿಂದ ಕೊಂಚ ಕಡಿಮೆಯಾಗಿದ್ದ ವರುಣ ಮತ್ತೆ ತನ್ನ ಆರ್ಭಟ ಶುರುಮಾಡಿದ್ದು, ನಿನ್ನೆಯಿಂದ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳ ಕಂಡುಬಂದಿದ್ದು, ಜಲಾಶಯದ ಹೊರಹರಿವಿನಲ್ಲೂ ಏರಿಕೆ ಮಾಡಲಾಗಿದೆ.

ಜಲಾಶಯದ ಇಂದಿನ ಒಳಹರಿವು 33,052 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಹೊರಹರಿವು 80,000 ಕ್ಯೂಸೆಕ್ಸ್‌ಗೆ ಏರಿಕೆ ಮಾಡಲಾಗಿದೆ.

ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 124.54 ಅಡಿಗಳಾಗಿದೆ. 49.452 ಟಿಎಂಸಿ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿಂದು 49.089 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ನಲ್ಲಿ ಹಡಗುಯಾನ ಅಡಚಣೆ : ಎಲ್ಲ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ…

22 mins ago

ಮೈಸೂರು | ತಾಲ್ಲೂಕು ಕಚೇರಿಗೆ ಆಯುಕ್ತರ ದಿಢೀರ್‌ ಭೇಟಿ, ಕಡತ ಪರಿಶೀಲನೆ

ಮೈಸೂರು : ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಬುಧವಾರ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ…

43 mins ago

ರಾಜ್ಯದಲ್ಲಿ ಏ.15ರಿಂದ ವಸತಿ ಗಣತಿ

ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ ’ಮನೆಗಳ ಪಟ್ಟಿ ಮತ್ತು ವಸತಿ ಗಣತಿ’ ಪ್ರಕ್ರಿಯೆ…

55 mins ago

ಸದನದಲ್ಲಿ ಮಾತನಾಡಲು ಅವಕಾಶ ನಿರಾಕರಣೆ : ರಾಹುಲ್‌ ಗಾಂಧಿ

ಹೊಸದಿಲ್ಲಿ : ಈ ಸದನವು ಒಂದು ಪಕ್ಷವನ್ನು ಪ್ರತಿನಿಧಿಸುವುದಿಲ್ಲ, ಬದಲಾಗಿ ಇಡೀ ದೇಶವನ್ನು ಪ್ರತಿನಿಧಿಸುತ್ತದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ…

1 hour ago

13 ವರ್ಷಗಳಿಂದ ಕೋಮಾ : ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂ ಅನುಮತಿ

ಹೊಸದಿಲ್ಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು…

2 hours ago

ಹಾರ್ಮುಜ್‌ ಜಲಸಂಧಿ ಬಳಿ ಅಮೇರಿಕಾ ಅಬ್ಬರ: ಇರಾನ್‌ನ 16 ನೌಕೆಗಳು ಧ್ವಂಸ

ಟೆಹರಾನ್:‌ ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್‌ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16…

4 hours ago