ಚನ್ನಪಟ್ಟಣ :ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ವೇ ನಲ್ಲಿ ಚನ್ನಪಟ್ಟಣದ ಬಳಿ ಅ. 1ರಂದು ಸರಣಿ ಅಪಘಾತವಾಗಿದೆ. ಬಸ್ಸೊಂದು ಆರು ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯಾಗಿ ನಜ್ಜುಗೊಜ್ಜಾಗಿ ರಸ್ತೆಪಕ್ಕದಲ್ಲಿ ನಿಂತಿರುವ ಕಾರುಗಳ ವಿಡಿಯೋವನ್ನು ಮಾಡಿದ್ದಾರೆ. ಆ ವಿಡಿಯೋವನ್ನು ಟ್ವಿಟರ್ ನಲ್ಲಿ ಅಪ್ಲೋಡ್ ಮಾಡಿರುವ ಪ್ರತಾಪ್ ಸಿಂಹ, ‘ಅತಿವೇಗದಿಂದಾಗಿ ಚನ್ನಪಟ್ಟಣದ ಬಳಿ ಆರೇಂಜ್ ಬಸ್ ಚಾಲಕ ಆರು ವಾಹನಗಳಿಗೆ ಹಿಂದಿನಿಂದ ಗುದ್ದಿ ಮಗುವೊಂದು ಸ್ಥಳದಲ್ಲೇ ಮೃತಪಟ್ಟಿದೆ. ಒಳ್ಳೆಯ ರಸ್ತೆಯ ಜೊತೆಗೆ, ನಿಯಂತ್ರಿತ ಚಾಲನೆಯೂ ಅಷ್ಟೇ ಮುಖ್ಯ. ಹೈವೇ ಪ್ಯಾಟ್ರೋಲಿಂಗ್ ಆರಂಭಿಸುತ್ತೇವೆ ಎಂದಿದ್ದಾರೆ.
ಚನ್ನಪಟ್ಟಣ: ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಶನಿವಾರ ಅಪಘಾತವೊಂದು ಸಂಭವಿಸಿದೆ. ಚನ್ನಪಟ್ಟಣದ ಬಳಿ ನಡೆದಿರುವ ಈ ಅಪಘಾತದಲ್ಲಿ ಮಗುವೊಂದು ಮೃತಪಟ್ಟಿದೆ. ಎಕ್ಸ್ ಪ್ರೆಸ್ ಹೈವೇಯಲ್ಲಿ ವೇಗವಾಗಿ ಸಾಗಿಬಂದ ಖಾಸಗಿ ಬಸ್ಸೊಂದು ಮುಂದೆ ಸಾಗುತ್ತಿದ್ದ ಕಾರೊಂದಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
, ಉತ್ತಮ ರಸ್ತೆಯಲ್ಲಿ ಸಾಗುವಾಗ ಸ್ವಯಂ ನಿಯಂತ್ರಣವೂ ಅಷ್ಟೇ ಮುಖ್ಯ. ಶೀಘ್ರವೇ ಹೈವೇ ಪ್ಯಾಟ್ರೋಲಿಂಗ್ (ಗಸ್ತು ಸಿಬ್ಬಂದಿ ನಿಯೋಜನೆ) ಆರಂಭಿಸುತ್ತೇವೆ ಎಂದು ಹೇಳಿದ್ದಾರೆ. ಬಸ್ ಡಿಕ್ಕಿ ಹೊಡೆದ ಪರಿಣಾಮ, ಆ ಕಾರು ಮುಂದಿನ ಕಾರಿಗೆ ಡಿಕ್ಕಿ ಹೊಡೆದಿದೆ. ಹೀಗೆ, ಸುಮಾರು 6 ಕಾರುಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ. ಇದರಲ್ಲೊಂದು ಕಾರಿನಲ್ಲಿದ್ದ ಮಗುವೊಂದು ಸಾವಿಗೀಡಾಗಿದೆ.
ಡಿಕ್ಕಿಯಾಗಿ ನಜ್ಜುಗೊಜ್ಜಾಗಿ ರಸ್ತೆಪಕ್ಕದಲ್ಲಿ ನಿಂತಿರುವ ಕಾರುಗಳ ವಿಡಿಯೋವನ್ನು ಮಾಡಿದ್ದಾರೆ. ಆ ವಿಡಿಯೋವನ್ನು ಟ್ವಿಟರ್ ನಲ್ಲಿ ಅಪ್ಲೋಡ್ ಮಾಡಿರುವ ಪ್ರತಾಪ್ ಸಿಂಹ, ಅತಿವೇಗದಿಂದಾಗಿ ಚನ್ನಪಟ್ಟಣದ ಬಳಿ ಆರೇಂಜ್ ಬಸ್ ಚಾಲಕ ಆರು ವಾಹನಗಳಿಗೆ ಹಿಂದಿನಿಂದ ಗುದ್ದಿ ಮಗುವೊಂದು ಸ್ಥಳದಲ್ಲೇ ಮೃತಪಟ್ಟಿದೆ. ಒಳ್ಳೆಯ ರಸ್ತೆಯ ಜೊತೆಗೆ, ನಿಯಂತ್ರಿತ ಚಾಲನೆಯೂ ಅಷ್ಟೇ ಮುಖ್ಯ. ಹೈವೇ ಪ್ಯಾಟ್ರೋಲಿಂಗ್ (ಗಸ್ತು ಸೇವೆ) ಆರಂಭಿಸುತ್ತೇವೆ. ಸ್ವನಿಯಂತ್ರಣ ಹೇರಿಕೊಳ್ಳಿ ಎಂದು ಜನರಿಗೆ ಕಿವಿಮಾತು ಹೇಳಿದ್ದಾರೆ.
ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್…
ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ…
ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…
ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ ನವೀನ್…
ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…
ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…