ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಹಾಲಿ ಹಾಗೂ ಮುಂದೆ ಕೈಗೊಳ್ಳಲಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಗಡ್ಕರಿ ಅವರ ನಿವಾಸಕ್ಕೆ ತಮ್ಮ ಆಪ್ತ ಅಧಿಕಾರಿಗಳ ಜತೆ ತೆರಳಿ ಭೇಟಿ ಮಾಡಿದ ಕುಮಾರಸ್ವಾಮಿ ಅವರು, ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ಕಾರ್ಯಗತ ಆಗುತ್ತಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಈಗಾಗಲೇ ಹಲವಾರು ಯೋಜನೆಗಳ ಬಗ್ಗೆ ಮನವಿ ಮಾಡಿದ್ದು, ಬಹುತೇಕ ಯೋಜನೆಗಳಿಗೆ ಹೆದ್ದಾರಿ ಸಚಿವರಿಂದ ಅನುಮೋದನೆ ದೊರೆತಿದೆ. ಉಳಿದ ಕೆಲವು ಯೋಜನೆಗಳ ಬಗ್ಗೆ ಸಚಿವರು ಹೆದ್ದಾರಿ ಸಚಿವರೊಂದಿಗೆ ಚರ್ಚಿಸಿದರು.
ಇದೇ ವೇಳೆ ಪಾಂಡವಪುರ ಸಕ್ಕರೆ ಕಾರ್ಖಾನೆ ಸಮೀಪದ ಸಿಡಿಎಸ್ ಕಾಲುವೆಯಿಂದ ದರಸಗುಪ್ಪೆ ನೀರು ಸಂಸ್ಕರಣಾ ಘಟಕದವರೆಗೂ ನಾಲ್ಕು ಪಥದ ಹೆದ್ದಾರಿಯ ಅಭಿವೃದ್ಧಿಗೆ ಅಗತ್ಯವಿರುವ ಹೆಚ್ಚುವರಿ ಅನುದಾನಕ್ಕೆ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದರು.
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…