ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಹಾಲಿ ಹಾಗೂ ಮುಂದೆ ಕೈಗೊಳ್ಳಲಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಗಡ್ಕರಿ ಅವರ ನಿವಾಸಕ್ಕೆ ತಮ್ಮ ಆಪ್ತ ಅಧಿಕಾರಿಗಳ ಜತೆ ತೆರಳಿ ಭೇಟಿ ಮಾಡಿದ ಕುಮಾರಸ್ವಾಮಿ ಅವರು, ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ಕಾರ್ಯಗತ ಆಗುತ್ತಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಈಗಾಗಲೇ ಹಲವಾರು ಯೋಜನೆಗಳ ಬಗ್ಗೆ ಮನವಿ ಮಾಡಿದ್ದು, ಬಹುತೇಕ ಯೋಜನೆಗಳಿಗೆ ಹೆದ್ದಾರಿ ಸಚಿವರಿಂದ ಅನುಮೋದನೆ ದೊರೆತಿದೆ. ಉಳಿದ ಕೆಲವು ಯೋಜನೆಗಳ ಬಗ್ಗೆ ಸಚಿವರು ಹೆದ್ದಾರಿ ಸಚಿವರೊಂದಿಗೆ ಚರ್ಚಿಸಿದರು.
ಇದೇ ವೇಳೆ ಪಾಂಡವಪುರ ಸಕ್ಕರೆ ಕಾರ್ಖಾನೆ ಸಮೀಪದ ಸಿಡಿಎಸ್ ಕಾಲುವೆಯಿಂದ ದರಸಗುಪ್ಪೆ ನೀರು ಸಂಸ್ಕರಣಾ ಘಟಕದವರೆಗೂ ನಾಲ್ಕು ಪಥದ ಹೆದ್ದಾರಿಯ ಅಭಿವೃದ್ಧಿಗೆ ಅಗತ್ಯವಿರುವ ಹೆಚ್ಚುವರಿ ಅನುದಾನಕ್ಕೆ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…