ಮಂಡ್ಯ: ನವೆಂಬರ್ ೦೧ರ ಕನ್ನಡ ರಾಜ್ಯೋತ್ಸವ ದಿನದಂದು ಜಿಲ್ಲೆಯ ಎಲ್ಲ ಮನೆಗಳಲ್ಲಿ, ಅಂಗಡಿ ಮುಗ್ಗಟ್ಟುಗಳು, ಹೋಟೆಲ್, ಮಾಲ್ಗಳ ಮುಂದೆ ಕನ್ನಡ ಧ್ವಜ ಹಾರಿಸಬೇಕು ಎಂದು ಕದಂಬಸೈನ್ಯ ಕನ್ನಡ ಸಂಘಟನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊರ ರಾಜ್ಯದಿಂದ ಬಂದು ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟು ನಡೆಸುವವರು ಬಹುತೇಕ ಕನ್ನಡ ವ್ಯಾಪಾರಸ್ಥರಾಗಿದ್ದು, ತಾವು ನೆಲೆಸಿರುವ ಕನ್ನಡ ನೆಲ ಜಲದ ಮೇಲೆ ಗೌರವವನ್ನು ಹೊಂದಿರಬೇಕು. ಮಂಡ್ಯ ಜಿಲ್ಲೆ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯಾಗಿದ್ದು, ಇಲ್ಲಿ ಎಲ್ಲಾ ಕನ್ನಡಿಗರು ಸೇರಿದಂತೆ ಪ್ರತಿಯೊಬ್ಬರೂ ಕನ್ನಡ ರಾಜ್ಯೋತ್ಸವದ ದಿನದಂದು ಕನ್ನಡ ಧ್ವಜ ಹಾರಿಸಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಮನವಿ ಮಾಡಿದರು.
ಆಟೋ ಚಾಲಕರು ತಮ್ಮ ಆಟೋಗಳನ್ನು ಸಿಂಗರಿಸಿ, ಧ್ವಜ ಹಾರಿಸುವ ಮೂಲಕ ಕನ್ನಡದ ಹಬ್ಬವನ್ನು ಸ್ವಾಭಿಮಾನದಿಂದ ಆಚರಿಸುತ್ತಾರೆ. ಅವರು ನಿಜವಾದ ಕನ್ನಡ ಅಭಿಮಾನಿಗಳು. ಅವರಂತೆಯೇ ಎಲ್ಲರೂ ತಮ್ಮ ಮನೆ, ಮಳಿಗೆ ಬಳಿ ಕನ್ನಡ ಧ್ವಜ ಹಾರಿಸಿ ಸ್ವಾಭಿಮಾನದಿಂದ ಕ್ನನಡ ಅಭಿಮಾನ ವ್ಯಕ್ತಪಡಿಸುವಂತೆ ಕರೆ ನೀಡಿದರು.
ನವೆಂಬರ್ ೦೧ರಂದು ಸರ್ಕಾರಿ ಅಧಿಕಾರಿಗಳು ಕೇವಲ ಹಾಜರಾತಿ ಪುಸ್ತಕದಲ್ಲಿ ಸಹಿಹಾಕಲಸ್ಟೇ ಕಛೇರಿಗೆ ಆಗಮಿಸುತ್ತಿದ್ದು, ಜಿಲ್ಲಾಡಳಿತದಿಂದ ಆದೇಶ ಬಂದರೆ ಮಾತ್ರ ಕನ್ನಡ ಧ್ವಜ ಹಾರಿಸುವ ಕೆಲಸ ಮುಂದಾಗುತ್ತಾರೆ. ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಅಧಿಕಾರಿಗಳು ಕನ್ನಡ ಧ್ವಜ ಹಾರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಕರ್ನಾಟಕದಲ್ಲಿ ಶೇ.೬೦ರಷ್ಟು ಕನ್ನಡ ಫಲಕ ಬಳಸಲೇ ಬೇಕು ಎಂದು ಹೈಕೋರ್ಟ್ ತೀರ್ಪು ನೀಡಿರುವುದನ್ನು ಕದಂಬ ಸೈನ್ಯ ಕನ್ನಡ ಸಂಘಟನೆ ಸ್ವಾಗತಿಸುತ್ತದೆ ಎಂದು ಇದೇ ವೇಳೆ ತಿಳಿಸಿದರು.
ಗೋಷ್ಠಿಯಲ್ಲಿ ಸಹಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ಸಂಚಾಲಕ ಆರಾದ್ಯ ಗುಡುಗನಹಳ್ಳಿ, ಜಿಲ್ಲಾ ಸಂಚಾಲಕ ಸಲ್ಮಾನ್ ಇದ್ದರು.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…