ಮಂಡ್ಯ

ಕನ್ನಡ ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸಿ; ಬೇಕ್ರಿ ರಮೇಶ್‌

ಮಂಡ್ಯ: ನವೆಂಬರ್ ೦೧ರ ಕನ್ನಡ ರಾಜ್ಯೋತ್ಸವ ದಿನದಂದು ಜಿಲ್ಲೆಯ ಎಲ್ಲ ಮನೆಗಳಲ್ಲಿ, ಅಂಗಡಿ ಮುಗ್ಗಟ್ಟುಗಳು, ಹೋಟೆಲ್, ಮಾಲ್‌ಗಳ ಮುಂದೆ ಕನ್ನಡ ಧ್ವಜ ಹಾರಿಸಬೇಕು ಎಂದು ಕದಂಬಸೈನ್ಯ ಕನ್ನಡ ಸಂಘಟನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊರ ರಾಜ್ಯದಿಂದ ಬಂದು ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟು ನಡೆಸುವವರು ಬಹುತೇಕ ಕನ್ನಡ ವ್ಯಾಪಾರಸ್ಥರಾಗಿದ್ದು, ತಾವು ನೆಲೆಸಿರುವ ಕನ್ನಡ ನೆಲ ಜಲದ ಮೇಲೆ ಗೌರವವನ್ನು ಹೊಂದಿರಬೇಕು. ಮಂಡ್ಯ ಜಿಲ್ಲೆ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯಾಗಿದ್ದು, ಇಲ್ಲಿ ಎಲ್ಲಾ ಕನ್ನಡಿಗರು ಸೇರಿದಂತೆ ಪ್ರತಿಯೊಬ್ಬರೂ ಕನ್ನಡ ರಾಜ್ಯೋತ್ಸವದ ದಿನದಂದು ಕನ್ನಡ ಧ್ವಜ ಹಾರಿಸಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಮನವಿ ಮಾಡಿದರು.

ಆಟೋ ಚಾಲಕರು ತಮ್ಮ ಆಟೋಗಳನ್ನು ಸಿಂಗರಿಸಿ, ಧ್ವಜ ಹಾರಿಸುವ ಮೂಲಕ ಕನ್ನಡದ ಹಬ್ಬವನ್ನು ಸ್ವಾಭಿಮಾನದಿಂದ ಆಚರಿಸುತ್ತಾರೆ. ಅವರು ನಿಜವಾದ ಕನ್ನಡ ಅಭಿಮಾನಿಗಳು. ಅವರಂತೆಯೇ ಎಲ್ಲರೂ ತಮ್ಮ ಮನೆ, ಮಳಿಗೆ ಬಳಿ ಕನ್ನಡ ಧ್ವಜ ಹಾರಿಸಿ ಸ್ವಾಭಿಮಾನದಿಂದ ಕ್ನನಡ ಅಭಿಮಾನ ವ್ಯಕ್ತಪಡಿಸುವಂತೆ ಕರೆ ನೀಡಿದರು.

ನವೆಂಬರ್ ೦೧ರಂದು ಸರ್ಕಾರಿ ಅಧಿಕಾರಿಗಳು ಕೇವಲ ಹಾಜರಾತಿ ಪುಸ್ತಕದಲ್ಲಿ ಸಹಿಹಾಕಲಸ್ಟೇ ಕಛೇರಿಗೆ ಆಗಮಿಸುತ್ತಿದ್ದು, ಜಿಲ್ಲಾಡಳಿತದಿಂದ ಆದೇಶ ಬಂದರೆ ಮಾತ್ರ ಕನ್ನಡ ಧ್ವಜ ಹಾರಿಸುವ ಕೆಲಸ ಮುಂದಾಗುತ್ತಾರೆ. ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಅಧಿಕಾರಿಗಳು ಕನ್ನಡ ಧ್ವಜ ಹಾರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕರ್ನಾಟಕದಲ್ಲಿ ಶೇ.೬೦ರಷ್ಟು ಕನ್ನಡ ಫಲಕ ಬಳಸಲೇ ಬೇಕು ಎಂದು ಹೈಕೋರ್ಟ್ ತೀರ್ಪು ನೀಡಿರುವುದನ್ನು ಕದಂಬ ಸೈನ್ಯ ಕನ್ನಡ ಸಂಘಟನೆ ಸ್ವಾಗತಿಸುತ್ತದೆ ಎಂದು ಇದೇ ವೇಳೆ ತಿಳಿಸಿದರು.

ಗೋಷ್ಠಿಯಲ್ಲಿ ಸಹಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ಸಂಚಾಲಕ ಆರಾದ್ಯ ಗುಡುಗನಹಳ್ಳಿ, ಜಿಲ್ಲಾ ಸಂಚಾಲಕ ಸಲ್ಮಾನ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

7 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

8 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

8 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

9 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

14 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

14 hours ago