ಮಂಡ್ಯ: ನವೆಂಬರ್ ೦೧ರ ಕನ್ನಡ ರಾಜ್ಯೋತ್ಸವ ದಿನದಂದು ಜಿಲ್ಲೆಯ ಎಲ್ಲ ಮನೆಗಳಲ್ಲಿ, ಅಂಗಡಿ ಮುಗ್ಗಟ್ಟುಗಳು, ಹೋಟೆಲ್, ಮಾಲ್ಗಳ ಮುಂದೆ ಕನ್ನಡ ಧ್ವಜ ಹಾರಿಸಬೇಕು ಎಂದು ಕದಂಬಸೈನ್ಯ ಕನ್ನಡ ಸಂಘಟನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊರ ರಾಜ್ಯದಿಂದ ಬಂದು ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟು ನಡೆಸುವವರು ಬಹುತೇಕ ಕನ್ನಡ ವ್ಯಾಪಾರಸ್ಥರಾಗಿದ್ದು, ತಾವು ನೆಲೆಸಿರುವ ಕನ್ನಡ ನೆಲ ಜಲದ ಮೇಲೆ ಗೌರವವನ್ನು ಹೊಂದಿರಬೇಕು. ಮಂಡ್ಯ ಜಿಲ್ಲೆ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯಾಗಿದ್ದು, ಇಲ್ಲಿ ಎಲ್ಲಾ ಕನ್ನಡಿಗರು ಸೇರಿದಂತೆ ಪ್ರತಿಯೊಬ್ಬರೂ ಕನ್ನಡ ರಾಜ್ಯೋತ್ಸವದ ದಿನದಂದು ಕನ್ನಡ ಧ್ವಜ ಹಾರಿಸಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಮನವಿ ಮಾಡಿದರು.
ಆಟೋ ಚಾಲಕರು ತಮ್ಮ ಆಟೋಗಳನ್ನು ಸಿಂಗರಿಸಿ, ಧ್ವಜ ಹಾರಿಸುವ ಮೂಲಕ ಕನ್ನಡದ ಹಬ್ಬವನ್ನು ಸ್ವಾಭಿಮಾನದಿಂದ ಆಚರಿಸುತ್ತಾರೆ. ಅವರು ನಿಜವಾದ ಕನ್ನಡ ಅಭಿಮಾನಿಗಳು. ಅವರಂತೆಯೇ ಎಲ್ಲರೂ ತಮ್ಮ ಮನೆ, ಮಳಿಗೆ ಬಳಿ ಕನ್ನಡ ಧ್ವಜ ಹಾರಿಸಿ ಸ್ವಾಭಿಮಾನದಿಂದ ಕ್ನನಡ ಅಭಿಮಾನ ವ್ಯಕ್ತಪಡಿಸುವಂತೆ ಕರೆ ನೀಡಿದರು.
ನವೆಂಬರ್ ೦೧ರಂದು ಸರ್ಕಾರಿ ಅಧಿಕಾರಿಗಳು ಕೇವಲ ಹಾಜರಾತಿ ಪುಸ್ತಕದಲ್ಲಿ ಸಹಿಹಾಕಲಸ್ಟೇ ಕಛೇರಿಗೆ ಆಗಮಿಸುತ್ತಿದ್ದು, ಜಿಲ್ಲಾಡಳಿತದಿಂದ ಆದೇಶ ಬಂದರೆ ಮಾತ್ರ ಕನ್ನಡ ಧ್ವಜ ಹಾರಿಸುವ ಕೆಲಸ ಮುಂದಾಗುತ್ತಾರೆ. ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಅಧಿಕಾರಿಗಳು ಕನ್ನಡ ಧ್ವಜ ಹಾರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಕರ್ನಾಟಕದಲ್ಲಿ ಶೇ.೬೦ರಷ್ಟು ಕನ್ನಡ ಫಲಕ ಬಳಸಲೇ ಬೇಕು ಎಂದು ಹೈಕೋರ್ಟ್ ತೀರ್ಪು ನೀಡಿರುವುದನ್ನು ಕದಂಬ ಸೈನ್ಯ ಕನ್ನಡ ಸಂಘಟನೆ ಸ್ವಾಗತಿಸುತ್ತದೆ ಎಂದು ಇದೇ ವೇಳೆ ತಿಳಿಸಿದರು.
ಗೋಷ್ಠಿಯಲ್ಲಿ ಸಹಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ಸಂಚಾಲಕ ಆರಾದ್ಯ ಗುಡುಗನಹಳ್ಳಿ, ಜಿಲ್ಲಾ ಸಂಚಾಲಕ ಸಲ್ಮಾನ್ ಇದ್ದರು.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…