ಮಂಡ್ಯ

ಮದುವೆ ಸಮಾರಂಭದ ವೇಳೆ ಹೆಜ್ಜೇನು ದಾಳಿ : ನಾಲ್ವರು ಗಂಭೀರ ಗಾಯ

ಶ್ರೀರಂಗಪಟ್ಟಣ: ಪಟ್ಟಣ ಪುರಸಭಾ ವ್ಯಾಪ್ತಿಯ ಗಂಜಾಂನಲ್ಲಿ ನಡೆದ ಮದುವೆ ಸಮಾರಂಭದ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ 4 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಗಂಜಾಂನ ಗೋಸಾಯಿಘಾಟ್ ರಸ್ತೆಯಲ್ಲಿರುವ ಗಣೇಶ ದೇವಾಲಯದ ಬಳಿ ನಡೆಯುತ್ತಿದ್ದ ಮದುವೆ ಸಮಾರಂಭದ ವೇಳೆ ಗಂಡು-ಹೆಣ್ಣಿನ ಕಡೆಯವರು ದೇವರು ತರಲು ನಾಲೆ ಬಳಿ ಹೋಗಿದ್ದ ವೇಳೆ ಪೂಜೆ ಮಾಡಿ ಹೊಗೆ ಹಾಕಿದ್ದು, ಮರದ ಮೇಲಿದ್ದ ಹೆಜ್ಜೇನು ಗೂಡಿಗೆ ಹೊಗೆ ಹಾಗೂ ಶಬ್ದ ತಾಗಿ ಜೇನು ಹುಳುಗಳು ದಾಳಿ ನಡೆಸಿವೆ.

ಪಕ್ಕದಲ್ಲೇ ಅಡುಗೆ ಮಾಡುತ್ತಿದ್ದವರ ಮೇಲೂ ಜೇನುಗಳು ಎರಗಿವೆ. ಈ ವೇಳೆ ಸಮಾರಂಭದಲ್ಲಿದ್ದ ಜನರು ಹೆಜ್ಜೇನು ದಾಳಿಯಿಂದ ತಪ್ಪಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದ್ದಾರೆ. ಈ ವೇಳೆ ಗೋಪಾಲ, ಗುರು, ಶ್ರೀನಿವಾಸ, ಉಮೇಶ ಸೇರಿ 4 ಮಂದಿಗೆ ಹೆಚ್ಚಿನ ದಾಳಿಯಾಗಿದ್ದು, ಮೂರು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಹೆಜ್ಜೇನು ದಾಳಿಯಿಂದ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಸ್ವಲ್ಪ ಸಮಯದ ನಂತರ ತಿಳಿಗೊಂಡು ಮದುವೆ ಕಾರ್ಯ ನಡೆಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಕುಶಾಲನಗರ: ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಕಾಡಾನೆ

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…

1 hour ago

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago

ಹಾರ್ಮುಜ್‌ ಜಲಸಂಧಿ ದಾಟಲು ಭಾರತಕ್ಕೆ ಇರಾನ್‌ ಸಮ್ಮತಿ

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…

2 hours ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

2 hours ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

2 hours ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

3 hours ago