ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ.
ಸುಮಾರು 26 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡಲು ಉದ್ದೇಶಿಸಿದ್ದು, ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಏಕಶಿಲೆಯಲ್ಲಿ ಬಾಲರಾಮನ ಪ್ರತಿಮೆ ಕೆತ್ತಿರುವ ಶಿಲ್ಪಿ ಅರುಣ್ ಯೋಗಿ ಅವರಿಗೆ ಜವಾಬ್ದಾರಿ ನೀಡಿದ್ದಾರೆ.
ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಶಿಲ್ಪಿ ಅರುಣ್ ಯೋಗಿ ಅವರೊಂದಿಗೆ ಸ್ಥಳ ಪರಿಶೀಲಿಸಿದ ಶಾಸಕ ಪಿ.ರವಿಕುಮಾರಗೌಡ ಅವರು, ಮಂಡ್ಯ ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಸುಮಾರು 200 ಕೋಟಿ ರೂ.ಗಳನ್ನು ನೀಡಲಾಗಿದ್ದು, ಕೆಂಪೇಗೌಡ ಪ್ರತಿಮೆಯನ್ನು 2 ಕೋಟಿ ರೂ.ಗಳಲ್ಲಿ ನಿರ್ಮಾಣ ಮಾಡಲಾಗುವುದು. ಅದರ ಜವಾಬ್ದಾರಿಯನ್ನು ಶಿಲ್ಪಿ ಅರುಣ್ ಯೋಗಿ ಅವರಿಗೆ ವಹಿಸಲಾಗಿದೆ ಎಂದರು.
ಕೆಂಪೇಗೌಡರ ಪ್ರತಿಮೆಯಿಂದ ಮಂಡ್ಯಕ್ಕೆ ಹೊಸ ರೂಪ ಬರಲಿದೆ. ಹೊಸ ಮಂಡ್ಯ ಕಟ್ಟುವ ಮಾತು ಕೊಟ್ಟಿದ್ದೆ. ಅದೇ ರೀತಿ ಹೊಸ ಸ್ಪರ್ಶ ಕೊಡುತ್ತಿದ್ದೇನೆ. ಮಂಡ್ಯ ನಗರ ಗುಂಡಿ ಮುಕ್ತ ನಗರವನ್ನಾಗಿ ಮಾಡಲಾಗುವುದು ಎಂದು ಹೇಳಿದರು.
ಶಿಲ್ಪಿ ಅರುಣ್ ಯೋಗಿ ಅವರು ಮಾತನಾಡಿ, ನಾಡಪ್ರಭು ಕೆಂಪೇಗೌಡರ ಪ್ರತಿಮೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ. ಮಹಾನ್ ನಾಯಕರ ಪ್ರತಿಮೆ ಕೆತ್ತನೆ ಮಾಡಲು ಶಾಸಕ ಪಿ. ರವಿಕುಮಾರ್ ಅವರು ನನಗೆ ವಹಿಸಿದ್ದಾರೆ. ಅವರ ನಿರೀಕ್ಷೆಯಂತೆ ಸುಂದರವಾದ ಪ್ರತಿಮೆಯನ್ನು ನಿರ್ಮಿಸಿಕೊಡುತ್ತೇನೆ ಎಂದರು.
ನಮ್ಮ ತಾಯಿ ಸಹ ಮಂಡ್ಯ ತಾಲ್ಲೂಕು ಮುಟ್ಟನಹಳ್ಳಿ ಗ್ರಾಮದವರು. ಈ ಹಿನ್ನೆಲೆಯಲ್ಲಿ ಮಂಡ್ಯ ಎಂದರೆ ನನಗೆ ವಿಶೇಷ ಅಭಿಮಾನ. ಅಚ್ಚುಕಟ್ಟಾಗಿ ಹಾಗೂ ಜವಾಬ್ದಾರಿಯುತವಾಗಿ ನಾನು ಕೆಲಸ ಮಾಡುತ್ತೇನೆ. ಮಹಾನ್ ನಾಯಕರಿಗೆ ಇತಿಹಾಸ ಇದೆ, ಆ ಇತಿಹಾಸ ತಿಳಿದು ನಾಯಕರ ಪ್ರತಿಮೆ ಕೆತ್ತನೆ ಮಾಡುತ್ತೇನೆ ಎಂದು ಹೇಳಿದರು.
ಈ ಸಂದರ್ಭ ನಗರಸಭೆ ಮಾಜಿ ಅಧ್ಯಕ್ಷ ಎಚ್.ಎಸ್. ಮಂಜು, ಮುಡಾ ಅಧ್ಯಕ್ಷ ಬಿ.ಪಿ. ಪ್ರಕಾಶ್, ನಗರಸಭೆ ಮಾಜಿ ಸದಸ್ಯ ಕೆ.ಸಿ. ರವೀಂದ್ರ ಇತರರಿದ್ದರು.
ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನೇ ಸೃಷ್ಟಿ ಮಾಡಿದ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಾಪ್ಟರ್ 1 ಚಿತ್ರವು…
ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ…
ಚೆನ್ನೈ : ದಳಪತಿ ವಿಜಯ್ ಅವರ ಮುಂಬರುವ ಚಿತ್ರ ಜನ ನಾಯಗನ್ಗೆ ಸೆನ್ಸಾರ್ ಪತ್ರ ನೀಡುವಂತೆ ಮದ್ರಾಸ್ ಹೈಕೋರ್ಟ್ ಮಹತ್ವದ…
ಬೆಂಗಳೂರು : ರಾಕಿ ಬಾಯ್ ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ 24 ಗಂಟೆಯಲ್ಲಿ ಬರೋಬ್ಬರಿ 200 ಮಿಲಿಯನ್ ಅಂದರೆ 20…
ನಂಜನಗೂಡು : ಇತ್ತೀಚಿನ ದಿನಗಳಲ್ಲಿ ನಂಜನಗೂಡಿನ ಕಾಡಂಚಿನ ಭಾಗಗಳಲ್ಲಿ ಆನೆ ಹಾವಳಿ ಹೆಚ್ಚಾಗಿದೆ. ಕಾಡಾನೆಗಳಿಂದ ತಮ್ಮ ಕೃಷಿ ಉಳಿಸುವ ಜೊತೆಗೆ…
ಚಾಮರಾಜನಗರ : ಅಗ್ನಿ ಅವಘಡ ಸಂಭವಿಸಿ ಹತ್ತಾರು ಅಂಗಡಿ ಮಳಿಗೆಗಳು ಸುಟ್ಟು ಭಸ್ಮ ಆಗಿರುವ ಘಟನೆ ಬಿಳಿಗಿರಿರಂಗನ ಬೆಟ್ಟದಲ್ಲಿ ಶುಕ್ರವಾರ…