ಮಂಡ್ಯ

ಮಂಡ್ಯದಲ್ಲಿ ಕೆಂಪೇಗೌಡರ ಬೃಹತ್‌ ಪ್ರತಿಮೆ : ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಕೆತ್ತನೆ ಜವಾಬ್ದಾರಿ

ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ.

ಸುಮಾರು 26 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡಲು ಉದ್ದೇಶಿಸಿದ್ದು, ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಏಕಶಿಲೆಯಲ್ಲಿ ಬಾಲರಾಮನ ಪ್ರತಿಮೆ ಕೆತ್ತಿರುವ ಶಿಲ್ಪಿ ಅರುಣ್ ಯೋಗಿ ಅವರಿಗೆ ಜವಾಬ್ದಾರಿ ನೀಡಿದ್ದಾರೆ.

ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಶಿಲ್ಪಿ ಅರುಣ್ ಯೋಗಿ ಅವರೊಂದಿಗೆ ಸ್ಥಳ ಪರಿಶೀಲಿಸಿದ ಶಾಸಕ ಪಿ.ರವಿಕುಮಾರಗೌಡ ಅವರು, ಮಂಡ್ಯ ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಸುಮಾರು 200 ಕೋಟಿ ರೂ.ಗಳನ್ನು ನೀಡಲಾಗಿದ್ದು, ಕೆಂಪೇಗೌಡ ಪ್ರತಿಮೆಯನ್ನು 2 ಕೋಟಿ ರೂ.ಗಳಲ್ಲಿ ನಿರ್ಮಾಣ ಮಾಡಲಾಗುವುದು. ಅದರ ಜವಾಬ್ದಾರಿಯನ್ನು ಶಿಲ್ಪಿ ಅರುಣ್ ಯೋಗಿ ಅವರಿಗೆ ವಹಿಸಲಾಗಿದೆ ಎಂದರು.

ಕೆಂಪೇಗೌಡರ ಪ್ರತಿಮೆಯಿಂದ ಮಂಡ್ಯಕ್ಕೆ ಹೊಸ ರೂಪ ಬರಲಿದೆ. ಹೊಸ ಮಂಡ್ಯ ಕಟ್ಟುವ ಮಾತು ಕೊಟ್ಟಿದ್ದೆ. ಅದೇ ರೀತಿ ಹೊಸ ಸ್ಪರ್ಶ ಕೊಡುತ್ತಿದ್ದೇನೆ. ಮಂಡ್ಯ ನಗರ ಗುಂಡಿ ಮುಕ್ತ ನಗರವನ್ನಾಗಿ ಮಾಡಲಾಗುವುದು ಎಂದು ಹೇಳಿದರು.

ಶಿಲ್ಪಿ ಅರುಣ್ ಯೋಗಿ ಅವರು ಮಾತನಾಡಿ, ನಾಡಪ್ರಭು ಕೆಂಪೇಗೌಡರ ಪ್ರತಿಮೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ. ಮಹಾನ್ ನಾಯಕರ ಪ್ರತಿಮೆ ಕೆತ್ತನೆ ಮಾಡಲು ಶಾಸಕ ಪಿ. ರವಿಕುಮಾರ್ ಅವರು ನನಗೆ ವಹಿಸಿದ್ದಾರೆ. ಅವರ ನಿರೀಕ್ಷೆಯಂತೆ ಸುಂದರವಾದ ಪ್ರತಿಮೆಯನ್ನು ನಿರ್ಮಿಸಿಕೊಡುತ್ತೇನೆ ಎಂದರು.

ನಮ್ಮ ತಾಯಿ ಸಹ ಮಂಡ್ಯ ತಾಲ್ಲೂಕು ಮುಟ್ಟನಹಳ್ಳಿ ಗ್ರಾಮದವರು. ಈ ಹಿನ್ನೆಲೆಯಲ್ಲಿ ಮಂಡ್ಯ ಎಂದರೆ ನನಗೆ ವಿಶೇಷ ಅಭಿಮಾನ. ಅಚ್ಚುಕಟ್ಟಾಗಿ ಹಾಗೂ ಜವಾಬ್ದಾರಿಯುತವಾಗಿ ನಾನು ಕೆಲಸ ಮಾಡುತ್ತೇನೆ. ಮಹಾನ್ ನಾಯಕರಿಗೆ ಇತಿಹಾಸ ಇದೆ, ಆ ಇತಿಹಾಸ ತಿಳಿದು ನಾಯಕರ ಪ್ರತಿಮೆ ಕೆತ್ತನೆ ಮಾಡುತ್ತೇನೆ ಎಂದು ಹೇಳಿದರು.

ಈ ಸಂದರ್ಭ ನಗರಸಭೆ ಮಾಜಿ ಅಧ್ಯಕ್ಷ ಎಚ್.ಎಸ್. ಮಂಜು, ಮುಡಾ ಅಧ್ಯಕ್ಷ ಬಿ.ಪಿ. ಪ್ರಕಾಶ್, ನಗರಸಭೆ ಮಾಜಿ ಸದಸ್ಯ ಕೆ.ಸಿ. ರವೀಂದ್ರ ಇತರರಿದ್ದರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

4 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

5 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

6 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

6 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

6 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

8 hours ago