ಮಂಡ್ಯ

ವಸತಿ ಶಾಲೆ, ವಿದ್ಯಾರ್ಥಿ ನಿಲಯಗಳಿಗೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಮ ಭಟ್ ಭೇಟಿ

ಮಂಡ್ಯ: ಜಿಲ್ಲೆಯ ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳಿಗೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ.ಶ್ಯಾಮ್‌ ಭಟ್‌ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿ ಬಗ್ಗೆ ಪರಿಶೀಲನೆ ನಡೆಸಿದರು.

ಅಧ್ಯಕ್ಷರ ಜೊತೆಗೆ ಸದಸ್ಯರಾದ ಕೆ.ವೆಂಕಟಗೋಡಿ ಅವರು ಸೇರಿ ಶ್ರೀ.ಡಿ.ದೇವರಾಜ ಅರಸು ಮೆಟ್ರಿಕ್‌ ನಂತರದ ಬಾಲಕರ ವಿದ್ಯಾರ್ಥಿ ನಿಲಯ, ಡಾ.ಬಿ.ಆರ್‌.ಅಂಬೇಡ್ಕರ್‌ ಸರ್ಕಾರಿ ವೃತ್ತಿಪರ ಕಾಲೇಜು ವಿದ್ಯಾರ್ಥಿ ನಿಲಯ ಹಾಗೂ ಚಾಮುಂಡೇಶ್ವರಿ ನಗರದಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಸರ್ಕಾರಿ ವೃತ್ತಿಪರ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿದರು.

ಅಡುಗೆ ಮನೆಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಶುಚಿ ಹಾಗೂ ರುಚಿಯಾದ ಆಹಾರ ನೀಡಬೇಕು. ಮೆಸ್ ಸಮಿತಿಯು ಪ್ರತಿ ದಿನ ಆಹಾರ ಸಾಮಗ್ರಿಗಳನ್ನು ಅಡುಗೆ ಮಾಡುವ ಸಿಬ್ಬಂದಿಗಳಿಗೆ ನೀಡುವಾಗ ಪರಿಶೀಲನೆ ನಡೆಸಬೇಕು. ಯಾವುದೇ ತೊಂದರೆ ಇದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದರು.

ನಂತರ, ಹಾಜರಿದ್ದ ವಿದ್ಯಾರ್ಥಿಗಳ ಬಳಿ ಮೆಸ್ ಸಮಿತಿ ರಚನೆಯಾಗಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.

ಅಡುಗೆ ತಯಾರಿಸುವ ಸಿಬ್ಬಂದಿಗಳು, ಸ್ವಚ್ಛತಾ ಸಿಬ್ಬಂದಿಗಳ ಜೊತೆ ಮಾತನಾಡಿ ಪ್ರತಿ ಮಾಹೆ ಸಂಬಳ ದೊರಕುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಂಡರು. ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದ ಅವರು ಖುದ್ದು ವಿದ್ಯಾರ್ಥಿಗಳ ಕೊಠಡಿಗೆ ತೆರಳಿ ಅಲ್ಲಿನ ಸೌಲಭ್ಯಗಳನ್ನು ವೀಕ್ಷಿಸಿದರು.

ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ಸೊಳ್ಳೆ ಪರದೆಗಳು ಹಾಗೂ ಚಳಿಗಾಲದಲ್ಲಿ ಗೀಸರ್ ಅವಶ್ಯಕತೆ ಇದ್ದು, ಈ ಕುರಿತಂತೆ ಜಿಲ್ಲಾ ಪಂಚಾಯತ್ ಅಥವಾ ಜಿಲ್ಲಾಡಳಿತದೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಪರಿಶೀಲನೆಯ ಸಂದರ್ಭದಲ್ಲಿ ಹಾಜರಾತಿ ಹಾಗೂ ಸ್ಟಾಕ್ ರಿಜಿಸ್ಟರ್ ಗಳನ್ನು ಸಹ ವೀಕ್ಷಿಸಿದರು.

ಪರಿಶೀಲನೆ ವೇಳೆ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಅರುಣ್ ಪೂಜರ್, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ್ ಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಂಜುಳ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿದ್ದಲಿಂಗೇಶ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು| ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಅಪಘಾತ: ಇಬ್ಬರು ಸಾವು

ಮಹಾದೇಶ್‌ ಎಂ ಗೌಡ  ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…

3 hours ago

ಹನೂರು: ಟ್ರ್ಯಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು

ಮಹಾದೇಶ್‌ ಎಂ ಗೌಡ  ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…

3 hours ago

ಮೈಸೂರು ಏರ್‌ಪೋರ್ಟ್‌ನಲ್ಲಿ ಸಿಎಂ, ಡಿಸಿಎಂ ಜೊತೆ ರಾಹುಲ್‌ ಗಾಂಧಿ ಮಾತುಕತೆ

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌…

6 hours ago

ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜನ‌ ಎಂಟ್ರಿ: ವಾಹನ ಸವಾರರಿಗೆ ಢವಢವ

ಮಹಾದೇಶ್‌ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…

6 hours ago

ಎಂ.ಲಕ್ಷ್ಮಣ್‌ ವಿರುದ್ಧ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡಿದ ಶಾಸಕ ಶ್ರೀವತ್ಸ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…

6 hours ago

ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ನೀಡಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…

6 hours ago