ಮಂಡ್ಯ

ನಾಡಗೀತೆಗೆ ನೂರರ ಸಂಭ್ರಮ : ಕನ್ನಡ ರಾಜ್ಯೋತ್ಸವದಂದು ಸಹಸ್ರಾರು ಕಂಠಗಳಿಂದ ಗಾಯನ

ಮಂಡ್ಯ : ಕುವೆಂಪು ರಚಿತ ನಾಡಗೀತೆ ನೂರು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವ ದಿನದಂದು ಸಹಸ್ರಾರು ಕಂಠಳಿಂದ ನಾಡಗೀತೆ ಗಾಯನ ಮಾಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು.

ಇಂದು (ಅ.18) ಕನ್ನಡ ರಾಜ್ಯೋತ್ಸವ ಆಚರಿಸುವ ಸಂಬಂಧ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯ ಶಾಲೆಗಳಿಂದ ಆಸಕ್ತ ಸಾವಿರ ಮಕ್ಕಳನ್ನು ಆಯ್ಕೆ ಮಾಡಿ ಅವರಿಗೆ ಮುಂಚಿತವಾಗಿ ನಾಡಗೀತೆ ಗಾಯನದ ತರಬೇತಿ ನೀಡಿ ಎಂದು ಹೇಳಿದರು.

ಇದನ್ನು ಓದಿ: ನಾನು ಕ್ಷಣಾರ್ಧದಲ್ಲಿ ಯುದ್ಧ ನಿಲ್ಲಿಸಬಲ್ಲೆ : ಪಾಕ್-ಅಘ್ಗನ್‌ ಯುದ್ಧದ ಬಗ್ಗೆ ಟ್ರಂಪ್‌

ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಈಗಾಗಲೇ ಸ್ವಾಗತ ಸಮಿತಿ, ವೇದಿಕೆ ಸಮಿತಿ, ಸಂಸ್ಕೃತಿಕ ಸಮಿತಿಯನ್ನು ರಚಿಸಲಾಗಿದೆ, ಎಲ್ಲಾ ಸಮಿತಿಯ ಸದಸ್ಯರುಗಳು ನಿಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ನಿಯಮಾನುಸಾರ ಎಲ್ಲರಿಗೂ ಆಹ್ವಾನ ಪತ್ರಿಕೆಗಳನ್ನು ನೀಡಿ ಎಂದರು.

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ 32 ಶಾಲೆಗಳಿಂದ ಪಥಸಂಚಲನ ನಡೆಯಲಿದೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕನ್ನಡ ನಾಡು,ನುಡಿ,ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವಂತಹ ಕಾರ್ಯಕ್ರಮಗಳಿಗೆ ಮಾತ್ರ ಅವಕಾಶ ನೀಡಿ, ಜಿಲ್ಲೆಯ ಐದು ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಲಾ ಪ್ರದರ್ಶನ ನಡೆಸಲಾಗುವುದು ಎಂದು ಮಾಹಿತಿ ತಿಳಿಸಿದರು.

ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮರುಬಿಂಬಿಸುವ ಟ್ಯಾಬ್ಲೋ ಪ್ರದರ್ಶನ
ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಿಂಬಿಸುವ ಟ್ಯಾಬ್ಲೋವನ್ನು ಪ್ರದರ್ಶನ ಮಾಡಲಾಗುವುದು, ಜೊತೆಗೆ ವಿವಿಧ ಇಲಾಖೆಗಳ 20 ಟ್ಯಾಬ್ಲೋಗಳ ಪ್ರದರ್ಶನ ನಡೆಸಲಾಗುವುದು, ತಾಯಿ ಭುವನೇಶ್ವರಿಗೆ ವಿಶೇಷ ಅಲಂಕಾರ ಮಾಡಲಾಗುವುದು ಎಂದರು.

ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ ಅವರು ಮಾತನಾಡಿ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೂ ಬಿಳಿ ಸಮವಸ್ತ್ರ ಧರಿಸಿ ಕಾರ್ಯಕ್ರಮಕ್ಕೆ ಹಾಜರಾಗಬೇಕು. ಇವತ್ತಿನಿಂದಲೇ ನಾಡಗೀತೆ ಗಾಯನಕ್ಕೆ ಆಸಕ್ತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಲಯಬದ್ಧವಾಗಿ ನಾಡಗೀತೆ ಹಾಡುವ ಕುರಿತಾಗಿ ತರಬೇತಿ ನೀಡಿ, ಎಲ್ಲಾ ವಿದ್ಯಾರ್ಥಿಗಳಿಗೆ ತರಬೇತಿ ದಿನಗಳಲ್ಲಿ ಹಾಗೂ ಕನ್ನಡ ರಾಜ್ಯೋತ್ಸವ ದಿನದಂದು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷೆ ಮಿರಾಶಿವಲಿಂಗಯ್ಯ, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಶೀಲ್ದಾರ್ ವಿಶ್ವನಾಥ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಪ್ರತೀಕ್, ನಗರಸಭೆ ಪೌರಾಯುಕ್ತೆ ಪಂಪಶ್ರೀ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಚಲುವಯ್ಯ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಓಂಪ್ರಕಾಶ್ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಕನ್ನಡ ಪರ ಸಂಘಟನೆಗಳ ಮುಖಂಡರುಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

6 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

7 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

7 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

7 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

7 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

7 hours ago