ಮಂಡ್ಯ

ಕುಡಿಯುವ ನೀರಿಗೆ ವಿಷ ಬೆರೆಸಿ ಪತ್ನಿ, ಮಕ್ಕಳ ಹತ್ಯೆ

ಮಂಡ್ಯ: ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನರಸಿಂಹ ಎಂಬ ಆರೋಪಿ ಕುಡಿಯುವ ನೀರಿಗೆ ವಿಷ ಬೆರೆಸಿದ್ದು ಪತ್ನಿ ಹಾಗೂ ಇಬ್ಬಳು ಮಕ್ಕಳನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಆರೋಪಿ ನರಸಿಂಹ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ್ದು, ಪತ್ನಿ ಕೀರ್ತನಾ (23), ಮಕ್ಕಳಾದ ಜಯಸಿಂಹ (4) ಹಾಗೂ ರಿಷಿಕಾ (1) ಮೃತಪಟ್ಟಿದ್ದಾರೆ. ಇನ್ನು ತಾನೂ ಸಹ ಈ ನೀರನ್ನು ಸೇವಿಸಿದ್ದು ಅಸ್ವಸ್ಥಗೊಂಡ ಆತನನ್ನು ನಾಗಮಂಗಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ನರಸಿಂಹ ಹಾಗೂ ಕೀರ್ತನಾ ಕಳೆದ ಐದು ವರ್ಷಗಳ ಹಿಂದೆ ವಿವಾಹವಾಗಿದ್ದು, ಪತಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎಂಬ ಕಾರಣಕ್ಕೆ ಕೀರ್ತನಾ ಪ್ರಶ್ನೆ ಎತ್ತಿದ್ದಾರೆ. ಈ ವಿಷಯಕ್ಕೆ ದಂಪತಿಗಳ ನಡುವೆ ಜಗಳ ನಡೆದಿದ್ದು, ಪತಿ ನೀರಿಗೆ ಕ್ರಿಮಿನಾಶಕ ಬೆರೆಸಿದ್ದಾನೆ. ಆರೋಪಿ ಕಟಿಂಗ್‌ ಶಾಪ್‌ ಇಟ್ಟುಕೊಂಡು ಕೆಲಸ ನಿರ್ವಹಿಸುತ್ತಿದ್ದು, ನಾಗಮಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಚಿರತೆ ಸೆರೆ

ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.…

17 mins ago

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ದಾಳಿ ಪ್ರಕರಣಗಳು: ಕಂಗಾಲಾದ ರೈತರು

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ…

21 mins ago

ಓದುಗರ ಪತ್ರ:   ಜನೌಷಧ ಕೇಂದ್ರ: ಸುಪ್ರೀಂ ತೀರ್ಮಾನ ಸ್ವಾಗತಾರ್ಹ

ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ…

28 mins ago

ಓದುಗರ ಪತ್ರ:  ಹೀಲಿಯಂ ಗ್ಯಾಸ್ ಬಲೂನ್ ಮಾರಾಟ ನಿಷೇಧಿಸಿ

ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ…

50 mins ago

ಓದುಗರ ಪತ್ರ: ಯಥಾ ರಾಜ.. ತಥಾ ಅಧಿಕಾರಿ

‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ…

1 hour ago

ಸೇವಾ ಕೈಂಕರ್ಯದ ಪ್ರತಿರೂಪ ಚೈತನ್ಯ ಚಾರಿಟಬಲ್ ಟ್ರಸ್ಟ್‌

ಮಹಿಳೆಯರು, ಮಕ್ಕಳ ಸಬಲೀಕರಣವೇ ಸಂಸ್ಥೆಯ ಧ್ಯೇಯ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವೆ ಮಾಡುವ ಸಂಸ್ಥೆಗಳು ವಿರಳ. ಅಂತಹ ವಿರಳಾತೀತ ವಿರಳ…

1 hour ago