ಮಂಡ್ಯ: ಜೆಡಿಎಸ್ ಯುವ ಘಟಕದ ಅಧಕ್ಷ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರು ರಾಜಕೀಯ ಹಾಗೂ ಸಿನಿಮಾ ರಂಗ ಎರಡರಲ್ಲೂ ತೊಡಗಿಸಿಕೊಂಡಿದ್ದರು. ಆದರೆ, ಇತ್ತೀಚೆಗೆ ರಾಜಕೀಯದಲ್ಲಿ ಹೆಚ್ಚು ಒಲುವು ತೋರಿಸಿ, ಎರಡು ಚುನಾವಣೆಗಳನ್ನು ಎದುರಿಸಿದ್ದರು. ಆದರೆ ಆ ಚುನಾವಣೆಗಳು ಅವರ ಕೈಹಿಡಿಯಲಿಲ್ಲ. ಹೀಗಾಗಿ ನಿಖಿಲ್ ಸಿನಿಮಾ ರಂಗಕ್ಕೆ ಹೋಗುತ್ತಾರೆ ಅಥವಾ ರಾಜಕೀಯದಲ್ಲೇ ಉಳಿದುಕೊಳ್ಳುತ್ತಾರಾ ಎನ್ನುವ ಅನುಮಾನವಿತ್ತು. ಈ ಬಗ್ಗೆ ನಿಖಿಲ್ ಅವರೇ ಮಂಡ್ಯದಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
ಈ ಸುದ್ದಿಗೋಷ್ಠಿಯಲ್ಲಿ ಅವರು ಚಿತ್ರರಂಗ ತೊರೆಯುವ ಬಗ್ಗೆ ಪರೋಕ್ಷವಾಗಿ ಮಾತನಾಡಿ, ಸಿನಿಮಾ ಮಾಡೋದನ್ನು ನಿಲ್ಲಿಸಿದ್ದೇನೆ. ಪಕ್ಷ ಕಟ್ಟುವ ಜವಾಬ್ದಾರಿ ನನ್ನ ಮೇಲಿದೆ. ನಾನು ಇನ್ಮುಂದೆ ಪಕ್ಷ ಕಟ್ಟುವ ಕಡೆ ಗಮನ ಕೋಡುತ್ತೇನೆ ಎಂದಿದ್ದಾರೆ.
ನಾನು ರಾಜ್ಯಾದ್ಯಂತ ಸಂಚಾರ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ. ನಾನು ಈಗ ಫುಲ್ ಟೈಮ್ ರಾಜಕಾರಣಿ ಎಂದು ನಿಖಿಲ್ ಘೋಷಿಸಿದ್ದಾರೆ. ಈ ಮೂಲಕ ಅವರು ಚಿತ್ರ ರಂಗಕ್ಕೆ ಗುಡ್ ಬೈ ಹೇಳುತ್ತಾರಾ? ಎಂದು ಕಾದು ನೋಡಬೇಕಿದೆ.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…