ಮಂಡ್ಯ : ನಾನೊಬ್ಬ ಸಾಮಾನ್ಯ ವ್ಯಕ್ತಿಯೇ, ಆದರೆ ನಾನು ಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕೆಲಸಗಳು ಸಾಮಾನ್ಯ ಅಲ್ಲ. ಜಿಲ್ಲೆಗೆ ಅನೇಕ ಉಪಯುಕ್ತವಾಗುವ ಕೆಲಸವನ್ನು ಮಾಡಿದ್ದೇನೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಇಂದು ಮಂಡ್ಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ 4 ಕೃಷಿ ವಿಶ್ವವಿದ್ಯಾಲಯಗಳು ಇವೆ 5 ನೇ ಯದಾಗಿ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯಾಗಿದೆ. ಮಂಡ್ಯ ಜಿಲ್ಲೆಗೆ ಕೃಷಿ ವಿಶ್ವವಿದ್ಯಾಲಯ ತಂದಿದ್ದು ಒಳ್ಳೆಯದು ಎಂಬ ಭಾವನೆ ಉಳಿದವರಿಗಿಲ್ಲ ಎಂದು ಹೇಳಿದರು.
ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಮೂಲಸೌಕರ್ಯ ಕಲ್ಪಿಸಲು 100 ಕೋಟಿ ಅನುದಾನ ಮಂಡ್ಯ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಯಾದ ಮೊದಲು ವರ್ಷದಲ್ಲೇ ಮೂಲಸೌಕರ್ಯ ಕಲ್ಪಿಸಲು ಸುಮಾರು 100 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಈಗಾಗಲೇ ಕ್ಯಾಬಿನೆಟ್ ನಲ್ಲಿ ಮಾಡಿ ಚರ್ಚೆ 23 ಕೋಟಿ ಮಂಜೂರು ಮಾಡಲಾಗಿದೆ ಶೀಘ್ರವೇ ಕಾಮಗಾರಿ ಪ್ರಾರಂಭವಾಗುತ್ತದೆ. ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಯಾದ ಮೊದಲನೇ ವರ್ಷದಲ್ಲೇ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿಗೆ ಆರ್ಥಿಕ ನೆರವು ನೀಡಿರುವ ಉದಾಹರಣೆ ಎಲ್ಲೂ ಕಂಡಿಲ್ಲ ಇದರ ಕುರಿತಾಗಿ ಲಘುವಾಗಿ ಮಾತನಾಡುವುದನ್ನು ಬಿಡಬೇಕು ಎಂದರು.
ಇದನ್ನು ಓದಿ: ನಾಳೆ ಸಂವಿಧಾನ ದಿನಾಚರಣೆ ; ವಿಶೇಷ ಕಾರ್ಯಕ್ರಮ, ಸಂವಿಧಾನ ಜಾಗೃತಿ ಜಾಥಾಕ್ಕೆ ಸೂಚನೆ
ಕೃಷಿ ಮೇಳ ಆಯೋಜನೆಯಿಂದ ರೈತರಿಗೆ ಅನೇಕ ಅನುಕೂಲ ಉಂಟಾಗುತ್ತದೆ ಕೃಷಿಯಲ್ಲಿ ತಾಂತ್ರಿಕತೆ, ಹೊಸ ತಳಿಗಳ ಪರಿಚಯ ಹಾಗೂ ಮುಂತಾದ ರೀತಿಯಲ್ಲಿ ಕೃಷಿಮೇಳ ರೈತರಿಗೆ ನೆರವು ನೀಡುತ್ತದೆ. ಮಂಡ್ಯ ವಿಸಿ ಫಾರಂ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯ ತನ್ನ ಮೊದಲ ಕೃಷಿ ಮೇಳ 2025 ದಲ್ಲೆ 350 ಕ್ಕೂ ಹೆಚ್ಚು ಕೃಷಿ ಮಳಿಗೆಗಳನ್ನು ತೆರೆಯಲಾಗಿದೆ ಇದು ಸಂತಸದ ಸಂಗತಿ ಎಂದು ಅಭಿಪ್ರಾಯಪಟ್ಟರು. ಸುಮಾರು 60 ಎಕರೆ ಪ್ರದೇಶಗಳಲ್ಲಿ 400 ರಿಂದ 500 ಹೆಚ್ಚಿನ ವಿವಿಧ ತಳಿಗಳ ಲೈವ್ ಪ್ರಾತ್ಯಕ್ಷಿಕೆಗಳನ್ನು ಸದರಿ ಕೃಷಿ ಮೇಳದಲ್ಲಿ ಕಾಣಬಹುದಾಗಿದೆ.
ಶುಗರ್ ಇರುವವರು ಸಹ ತಿನ್ನಬಹುದಾದ ಭತ್ತದ ತಳಿಯನ್ನು ಫಿಲಿಫೈನ್ಸ್ ದೇಶದ ಅಂತಾರಾಷ್ಟ್ರೀಯ ಭತ್ತದ ಸಂಶೋಧನಾ ಕೇಂದ್ರದ ಜೊತೆ ಒಪ್ಪಂದ ಮಾಡಿಕೊಂಡು ನಮ್ಮಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿರುವ ಭತ್ತದ ತಳಿಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಹೇಳಿದರು. ಮೊದಲೆಲ್ಲ ಒಂದು ತಳಿಯನ್ನು ಅಭಿವೃದ್ಧಿಪಡಿಸಲು ಸುಮಾರು 10 ವರ್ಷಕ್ಕೂ ಹೆಚ್ಚಿನ ಕಾಲ ಅಗತ್ಯವಿತ್ತು ಆದರೆ ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯದ ಮೂಲಕ ಕೇವಲ ಎರಡು ವರ್ಷದಲ್ಲೇ ಅಭಿವೃದ್ಧಿ ಪಡಿಸಿಬಹುದಾಗಿದೆ. ಮಂಡ್ಯ ಕೃಷಿ ಮೇಳ 2025 ಅನ್ನು ಮುಖ್ಯಮಂತ್ರಿಗಳು ಉದ್ಘಾಟನೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ಶಿ
ವಮೊಗ್ಗ ಕೃಷಿ ವಿಶ್ವವಿದ್ಯಾನಿಲಯಕ್ಕೆ ಅನುಮೋದನೆ ದೊರೆತಿದ್ದು 2008 ರಲ್ಲಿ ಆದರೆ ಟೋಕನ್ ಅಡ್ವಾನ್ಸ್ ಆಗಿದ್ದು 2013 ರಲ್ಲಿ ಆದರೆ ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದಲ್ಲಿ ಇವೆಲ್ಲವೂ ಒಂದೇ ವರ್ಷದಲ್ಲಿ ಆಗಿದೆ. ಮಂಡ್ಯ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಯಾದ ಆರು ತಿಂಗಳೊಳಗೆ ಯುಜಿಸಿ ಪಟ್ಟಿಗೆ ಸೇರಿದೆ ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಾರಣ. ಮಂಡ್ಯ ಜಿಲ್ಲೆಗೆ ಕಾಂಗ್ರೆಸ್ ಸರಕಾರ ಕೊಟ್ಟ ಕೊಡುಗೆ ಮಂಡ್ಯ ಕೃಷಿ ವಿಶ್ವವಿದ್ಯಾನಿಲಯ ಎಂದು ಹೇಳಿದರು. ನಂತರ ಕೃಷಿ ಮೇಳ 2025 ರ ಪೋಸ್ಟರ್ ಅನ್ನು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಬಿಡುಗಡೆ ಮಾಡಿದರು. ಸಭೆಯಲ್ಲಿ ಮೈ ಶುಗರ್ ಅಧ್ಯಕ್ಷ ಸಿ.ಡಿ ಗಂಗಾಧರ, ಮಂಡ್ಯ ಕೃಷಿ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಹರಿಣಿ ಕುಮಾರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ ಡಿಸಿಸಿ ಬ್ಯಾಂಕ್ ನಿರ್ದೇಶಕ ಆಶೋಕ್,ಅಂಜನಾಶ್ರೀಕಾಂತ್,ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…