ರಾಮನಗರ: ನಾನು ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬಾರದು ಅಂತಾ ಇದ್ದೆ, ಆದರೆ ಅನಿವಾರ್ಯವಾಗಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರದ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾತನಾಡಿದ ಹೆಚ್ಡಿಕೆ ಸಿಎಂ ಆಗಿದ್ದಾಗ 25 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದ್ದೇನೆ. ಚನ್ನಪಟ್ಟಣವನ್ನು ಬದುಕಿರುವವರೆಗೂ ನಾನು ಎಂದಿಗೂ ಮರೆಯುವುದಿಲ್ಲ. ಈಗಾಗಲೇ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಕೇಂದ್ರ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದೇನೆ. ನಮ್ಮ ಕೆಲಸ ಮಾಡುತ್ತಾನೆ ಅಂತಾ ಜನರು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂದರು.
ರಾಮನಗರ ಅಭಿವೃದ್ಧಿ ಮಾಡಿದ್ದು ನಾನು ಮತ್ತು ಹೆಚ್ಡಿ ದೇವೇಗೌಡರು. ಅಣ್ಣ ತಮ್ಮ ಬಂದು ಏನು ಮಾಡಿದರು ಎಂದು ಡಿಕೆ ಬ್ರದರ್ಸ್ ವಿರುದ್ಧ ಕಿಡಿಕಾರಿದ್ರು. ಜೊತೆಗೆ ಅಂತಾರಾಷ್ಟ್ರೀಯ ಮಟ್ಟದ ರೇಷ್ಮೆ ಮಾರುಕಟ್ಟೆ ಮಾಡಿಸಿದೆ. ರೈತರಿಗಾಗಿ ಮ್ಯಾಂಗೋ ಯೂನಿಟ್ ಸ್ಥಾಪನೆ ಮಾಡಿದ್ದೆ. ರಾಜೀವ್ ಗಾಂಧಿ ಆಸ್ಪತ್ರೆ ಇಲ್ಲಿ ಮಾಡಿಸಲು ಪ್ರಯತ್ನಿಸಿದೆ. ಇವತ್ತು ನಿದ್ದೆಗಟ್ಟಿದ್ದಾರೆ. ಇಂತಹ 10 ಜನ ಹುಟ್ಟಿ ಬಂದರೂ ಏನು ಮಾಡುವುದಕ್ಕೂ ಆಗಲ್ಲ ಎಂದು ವಾಗ್ದಾಳಿ ನಡೆಸಿದರು.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…