ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ವೀಕ್ಷಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂದೂರು ಗ್ರಾಮದ ಟೋಲ್ ಪ್ಲಾಜಾ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು.
ಟೋಲ್ ಸಂಗ್ರಹಿಸುವುದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರೋದಿಲ್ಲ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅದನ್ನು ನೋಡಿಕೊಳ್ಳುತ್ತದೆ, ಹೆದ್ದಾರಿ ಕಾಮಗಾರಿಯಲ್ಲಿ ಇನ್ನೂ ಬಹಳಷ್ಟು ಕೆಲಸಗಳು ಉಳಿದುಕೊಂಡಿರುವುದರಿಂದ ಟೋಲ್ ಸಂಗ್ರಹಿಸುವುದನ್ನು ನಿಲ್ಲಿಸ ಬೇಕೆಂದು ದೆಹಲಿಗೆ ಹೋದಾಗ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜೊತೆ ಮಾತಾಡುವುದಾಗಿ ಮುಖ್ಯಮಂತ್ರಿ ಹೇಳಿದರು.
ಸಿದ್ದರಾಮಯ್ಯ ಅವರಿಂದ ಅನುಮತಿ ಪಡೆದು ಮಾತು ಮುಂದುವರೆಸಿದ ಚಲುವರಾಯಸ್ವಾಮಿ, ಹಿಂದಿನ ಬಿಜೆಪಿ ಸರ್ಕಾರ ಎಕ್ಸ್ ಪ್ರೆಸ್ ವೇಯನ್ನು ನಿರ್ಲಕ್ಷಿಸಿದ ಕಾರಣ ಕಾಂಗ್ರೆಸ್ ಸರ್ಕಾರ ದೋಷಗಳನ್ನು ಸರಿ ಮಾಡಬೇಕಾಗಿ ಬಂದಿದೆ. ಏನೆಲ್ಲ ಕೆಲಸಗಳು ಆಗಬೇಕಿದೆ ಎಂಬ ಸೂಚನೆಗಳನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ, ಹೆಚ್ಚುವರಿ 151 ಕೋಟಿ ರೂ. ಗಳ ಪ್ರಸ್ತಾವನೆಯನ್ನೂ ಕೇಂದ್ರ ಸರ್ಕಾರಕ್ಕೆ ಕಳಿಸಲಾಗಿದೆ, ಆದಷ್ಟು ಬೇಗ ಹೆದ್ದಾರಿಯಲ್ಲಿನ ಎಲ್ಲ ದೋಷಗಳನ್ನು ಸರಿಪಡಿಸಲಾಗುವುದು ಎಂದು ಸಚಿವ ಹೇಳಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…