ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ವೀಕ್ಷಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂದೂರು ಗ್ರಾಮದ ಟೋಲ್ ಪ್ಲಾಜಾ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು.
ಟೋಲ್ ಸಂಗ್ರಹಿಸುವುದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರೋದಿಲ್ಲ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅದನ್ನು ನೋಡಿಕೊಳ್ಳುತ್ತದೆ, ಹೆದ್ದಾರಿ ಕಾಮಗಾರಿಯಲ್ಲಿ ಇನ್ನೂ ಬಹಳಷ್ಟು ಕೆಲಸಗಳು ಉಳಿದುಕೊಂಡಿರುವುದರಿಂದ ಟೋಲ್ ಸಂಗ್ರಹಿಸುವುದನ್ನು ನಿಲ್ಲಿಸ ಬೇಕೆಂದು ದೆಹಲಿಗೆ ಹೋದಾಗ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜೊತೆ ಮಾತಾಡುವುದಾಗಿ ಮುಖ್ಯಮಂತ್ರಿ ಹೇಳಿದರು.
ಸಿದ್ದರಾಮಯ್ಯ ಅವರಿಂದ ಅನುಮತಿ ಪಡೆದು ಮಾತು ಮುಂದುವರೆಸಿದ ಚಲುವರಾಯಸ್ವಾಮಿ, ಹಿಂದಿನ ಬಿಜೆಪಿ ಸರ್ಕಾರ ಎಕ್ಸ್ ಪ್ರೆಸ್ ವೇಯನ್ನು ನಿರ್ಲಕ್ಷಿಸಿದ ಕಾರಣ ಕಾಂಗ್ರೆಸ್ ಸರ್ಕಾರ ದೋಷಗಳನ್ನು ಸರಿ ಮಾಡಬೇಕಾಗಿ ಬಂದಿದೆ. ಏನೆಲ್ಲ ಕೆಲಸಗಳು ಆಗಬೇಕಿದೆ ಎಂಬ ಸೂಚನೆಗಳನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ, ಹೆಚ್ಚುವರಿ 151 ಕೋಟಿ ರೂ. ಗಳ ಪ್ರಸ್ತಾವನೆಯನ್ನೂ ಕೇಂದ್ರ ಸರ್ಕಾರಕ್ಕೆ ಕಳಿಸಲಾಗಿದೆ, ಆದಷ್ಟು ಬೇಗ ಹೆದ್ದಾರಿಯಲ್ಲಿನ ಎಲ್ಲ ದೋಷಗಳನ್ನು ಸರಿಪಡಿಸಲಾಗುವುದು ಎಂದು ಸಚಿವ ಹೇಳಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…