ಮಂಡ್ಯ

ಮಂಡ್ಯಕ್ಕೆ ಎರಡು ಕೈಗಾರಿಕೆಗಳನ್ನಾದರೂ ತರುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ ಘೋಷಣೆ

ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು ಗೆಲ್ಲಿಸಿದ್ದಾರೆ. ಈ ಜನರಿಗೆ ದ್ರೋಹ ಮಾಡುವ ವ್ಯಕ್ತಿ ನಾನಲ್ಲ. ಮಂಡ್ಯಕ್ಕೆ ಕನಿಷ್ಠಪಕ್ಷ ಎರಡು ಕೈಗಾರಿಕೆಗಳನ್ನಾದರೂ ತರುತ್ತೇನೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದರು.

ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಶುಕ್ರವಾರ ನಡೆದ ‘ವಿಜ್ಞಾತಂ ಉತ್ಸವ’ ಸಮಾರಂಭದಲ್ಲಿ ವಿಜ್ಞಾನಿ ಡಾ.ಎಂ.ಕೆ.ಸೂರಪ್ಪ ಅವರಿಗೆ ಶ್ರೀ ಆದಿಚುಂಚನಗಿರಿ ಕ್ಷೇತ್ರದ ವತಿಯಿಂದ ನೀಡಲಾಗುವ ‘ವಿಜ್ಞಾತಂ’ ಪ್ರಶಸ್ತಿಯನ್ನು ಪ್ರದಾನ ಮಾಡಿ ಅವರು ಮಾತನಾಡಿದರು.

ಅಭಿವೃದ್ಧಿಯಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ. ಪರಸ್ಪರ ಟೀಕೆ, ದೋಷಾರೋಪ ಮಾಡಿಕೊಳ್ಳುವ ಅಗತ್ಯವೂ ಇಲ್ಲ. ನಾವೆಲ್ಲರೂ ಸೇರಿ ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯೋಣ ಎಂದು ಅವರು ಹೇಳಿದರು.

ವೇದಿಕೆಯ ಮೇಲೆ ಕೂತಿದ್ದ ರಾಜ್ಯದ ಸಚಿವರುಗಳ ಎದುರಿನಲ್ಲಿಯೇ ರಾಜ್ಯದ ಪ್ರಗತಿಯ ಬಗ್ಗೆ ಒತ್ತಿ ಹೇಳಿದ ಸಚಿವರು, ಈಗಾಗಲೇ ನಾನು ಘೋಷಣೆ ಮಾಡಿದಂತೆ ಮಂಡ್ಯಕ್ಕೆ 500 ಕೋಟಿ ರೂ.ವೆಚ್ಚದಲ್ಲಿ ಜಾಗತಿಕ ಮಟ್ಟದ ಎಆರ್‌ಎಐ ಸಂಶೋಧನಾ ಕೇಂದ್ರವನ್ನು ತರಲಾಗುವುದು. ಕೇಂದ್ರ ಬಜೆಟ್‌ನಲ್ಲೇ ಯೋಜನೆಗೆ ಹಣ ಮೀಸಲು ಇಡಲಾಗಿದ್ದು, 100 ಎಕರೆ ಜಾಗ ಬೇಕೆಂದು ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಅದಷ್ಟು ಬೇಗ ರಾಜ್ಯ ಸರ್ಕಾರ ಸೂಕ್ತ ಜಾಗವನ್ನು ಕೆಐಎಡಿಬಿಯಿಂದ ಗುರುತಿಸಿ ಅಭಿವೃದ್ಧಿ ಮಾಡಿ ನಮಗೆ ಹಸ್ತಾಂತರ ಮಾಡಬೇಕು. ಜನಪ್ರತಿನಿಧಿಗಳಿಗೆ ಜಾಗ ಕೊಡುವ ಅಧಿಕಾರ ಇಲ್ಲ. ಈ ಬಗ್ಗೆ ರಾಜಕೀಯ ಅಗತ್ಯ ಇಲ್ಲ ಎಂದು ಹೇಳಿದರು.

ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ (ಎಆರ್‌ಎಐ) ಕೇಂದ್ರಕ್ಕೆ ಕೊನೆ ಪಕ್ಷ 1000 ಕೋಟಿ ರೂ.ಗಳನ್ನಾದರೂ ಹೂಡಿಕೆ ಮಾಡಲಾಗುವುದು. ಈ ಯೋಜನೆ ಮಂಡ್ಯದ ಚಿತ್ರಣವನ್ನೇ ಬದಲಿಸಲಿದೆ. ಉದ್ಯೋಗ ಸೃಷ್ಟಿ ಅಷ್ಟೇ ಅಲ್ಲದೆ, ಪರೋಕ್ಷ ಉದ್ಯೋಗಗಳನ್ನು ಭಾರೀ ಪ್ರಮಾಣದಲ್ಲಿ ಸೃಷ್ಟಿಸಿ ದೊಡ್ಡ ಮಟ್ಟದ ಆಟೋ ಇಕೋ ಸಿಸ್ಟಮ್ ಅನ್ನು ಸೃಷ್ಟಿ ಮಾಡುತ್ತದೆ. ಜತೆಗೆ ಮತ್ತೊಂದು ಕೈಗಾರಿಕೆಯನ್ನು ತರುವ ಬಗ್ಗೆ ನಾನು ನಿಕಟವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದರು.

ಶ್ರೀ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. 13ನೇ ಪಟ್ಟಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ಪರಮಪೂಜ್ಯರಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಗೋಸಾಯಿ ಮಠದ ಶ್ರೀ ಮಂಜುನಾಥ ಭಾರತೀ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಸಚಿವರಾದ ಎನ್.ಚಲುವರಾಯಸ್ವಾಮಿ, ಕೆ.ಎಚ್.ಮುನಿಯಪ್ಪ, ಶಾಸಕ ಎಚ್.ಟಿ.ಮಂಜು, ಮಾಜಿ ಶಾಸಕ ಸುರೇಶ್‌ಗೌಡ ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

3 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

3 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

3 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

3 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

15 hours ago