ಮಂಡ್ಯ: ಮಂಡ್ಯ ಜಿಲ್ಲೆಗೆ ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ತಂದು ಜಿಲ್ಲೆಯಲ್ಲಿ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಮಂಡ್ಯ ಜಿಲ್ಲೆಯ ಜನರ ಋಣ ತೀರಿಸುತ್ತೇನೆ ಎಂದು ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆಗಳ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಹೇಳಿದರು.
ಜಿಲ್ಲೆಯ ನಿಡಘಟ್ಟದಲ್ಲಿ ಶನಿವಾರ (ಜೂನ್.15) ಪಕ್ಷದ ಕಾರ್ಯಕರ್ತರು, ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಗೂ ನನಗೂ ಹಾಗೂ ನಮ್ಮ ತಂದೆಯವರಿಗೂ ಅವಿನಾಭಾವ ಸಂಬಂಧವಿದೆ. ಹೀಗಾಗಿ ಈ ಬಾರಿಯ ಲೋಕ ಚುನಾವಣೆಯಲ್ಲಿಯೂ ನನ್ನನ್ನು ಬಹಳ ಅಂತರದಿಂದ ಗೆಲ್ಲುವಂತೆ ಮಾಡಿದ್ದೀರಿ. ಈ ಚುನಾವಣೆಯಲ್ಲಿ ನಿಲ್ಲಲ್ಲು ಪ್ರಧಾನಿ ಅವರ ಒತ್ತಡವಿತ್ತು ಹಾಗಾಗಿ ನಿಂತು ಗೆದ್ದೆ. ಇದಕ್ಕಾಗಿದೆ ಪ್ರಧಾನಿ ಮೋದಿ ಅವರು ನನಗೆ ಎರಡು ಖಾತೆಗಳನ್ನು ನೀಡಿದ್ದಾರೆ ಎಂದರು.
ದೇಶ ಹಾಗೂ ರಾಜ್ಯದ ರೈತರ ಬಗೆಗಿನ ಸಮಸ್ಯೆಗಳನ್ನು ಬಗೆಹರಿಸುವುದೇ ನನ್ನ ಮುಂದಿನ ದಿನಗಳ ಗುರಿಯಾಗಿದೆ. ಮಂಡ್ಯ ಜಿಲ್ಲೆ ಕಳೆದ 50 ವರ್ಷಗಳಿಂದಲೂ ಅಭಿವೃದ್ಧಿ ಕಂಡಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ದುಡಿಯಲಿದ್ದೇನೆ ಎಂದರು.
ಇನ್ನು ಮಂಡ್ಯ ಜಿಲ್ಲೆಗೆ ಅಗತ್ಯವಾಗಿ ಪರಿಹರಿಸಬೇಕಾಗಿರುವ ಕಾವೇರಿ ನೀರಿನ ಸಮಸ್ಯೆಗೆ ನ್ಯಾಯ ಒದಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಬಳಿ ಧನಿ ಎತ್ತಿ ಕಾವೇರಿ ನ್ಯಾಯ ಕೊಡಿಸುವುದೇ ನನ್ನ ಮುಂದಿನ ಕೆಲಸ. ವಾರದಲ್ಲಿ ಒಂದು ದಿನವಾದರು ಬಂದು ನಿಮ್ಮ ಸೇವೆ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನನ್ನನ್ನು ಬೆಳೆಸಿದ ಮಂಡ್ಯ ಜಿಲ್ಲೆಗೆ ನನ್ನ ಕೃತಜ್ಞತೆಗಳು ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭಾವುಕರಾದರು.
ಮದ್ದೂರು: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಸಮೀಪದ ಗೂಳೂರು-ಚಿಕ್ಕದೊಡ್ಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಚಿರತೆಯೊಂದು ಸೆರೆಯಾಗಿದೆ.…
ಬೆಂಗಳೂರು: ನಂದಿನಿ ಬ್ರಾಂಡ್ನ ಕೆಲವು ಉತ್ಪನ್ನಗಳ ಸೇವನೆ ಅಸುರಕ್ಷಿತ, ಆರೋಗ್ಯಕ್ಕೆ ಹಾನಿ ಎಂದೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೆಗಳು ವೈರಲ್ ಆಗುತ್ತಿವೆ.…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ... ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ?…
ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ…
ಬೆಂಗಳೂರು: ಪ್ರಸಕ್ತ 2026-27 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ- 1 ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ಹಾಗೂ…
ಕುಶಾಲನಗರ: ಗುತ್ತಿಗೆದಾರ ಲೈಸೆನ್ಸ್ ನೀಡಲು ಲೋಕೋಪಯೋಗಿ ಇಲಾಖೆ ಕಚೇರಿಯ ನೌಕರನೊಬ್ಬ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದು,…