ಮಂಡ್ಯ

ಮಂಡ್ಯ ಕ್ಷೇತ್ರ ಅಭಿವೃದ್ಧಿ ಮಾಡುವ ಮೂಲಕ ನಿಮ್ಮ ಋಣ ತೀರಿಸುತ್ತೇನೆ: ಎಚ್‌ಡಿ ಕುಮಾರಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಗೆ ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ತಂದು ಜಿಲ್ಲೆಯಲ್ಲಿ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಮಂಡ್ಯ ಜಿಲ್ಲೆಯ ಜನರ ಋಣ ತೀರಿಸುತ್ತೇನೆ ಎಂದು ಕೇಂದ್ರ ಉಕ್ಕು ಹಾಗೂ ಬೃಹತ್‌ ಕೈಗಾರಿಕೆಗಳ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಹೇಳಿದರು.

ಜಿಲ್ಲೆಯ ನಿಡಘಟ್ಟದಲ್ಲಿ ಶನಿವಾರ (ಜೂನ್‌.15) ಪಕ್ಷದ ಕಾರ್ಯಕರ್ತರು, ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಗೂ ನನಗೂ ಹಾಗೂ ನಮ್ಮ ತಂದೆಯವರಿಗೂ ಅವಿನಾಭಾವ ಸಂಬಂಧವಿದೆ. ಹೀಗಾಗಿ ಈ ಬಾರಿಯ ಲೋಕ ಚುನಾವಣೆಯಲ್ಲಿಯೂ ನನ್ನನ್ನು ಬಹಳ ಅಂತರದಿಂದ ಗೆಲ್ಲುವಂತೆ ಮಾಡಿದ್ದೀರಿ. ಈ ಚುನಾವಣೆಯಲ್ಲಿ ನಿಲ್ಲಲ್ಲು ಪ್ರಧಾನಿ ಅವರ ಒತ್ತಡವಿತ್ತು ಹಾಗಾಗಿ ನಿಂತು ಗೆದ್ದೆ. ಇದಕ್ಕಾಗಿದೆ ಪ್ರಧಾನಿ ಮೋದಿ ಅವರು ನನಗೆ ಎರಡು ಖಾತೆಗಳನ್ನು ನೀಡಿದ್ದಾರೆ ಎಂದರು.

ದೇಶ ಹಾಗೂ ರಾಜ್ಯದ ರೈತರ ಬಗೆಗಿನ ಸಮಸ್ಯೆಗಳನ್ನು ಬಗೆಹರಿಸುವುದೇ ನನ್ನ ಮುಂದಿನ ದಿನಗಳ ಗುರಿಯಾಗಿದೆ. ಮಂಡ್ಯ ಜಿಲ್ಲೆ ಕಳೆದ 50 ವರ್ಷಗಳಿಂದಲೂ ಅಭಿವೃದ್ಧಿ ಕಂಡಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ದುಡಿಯಲಿದ್ದೇನೆ ಎಂದರು.

ಇನ್ನು ಮಂಡ್ಯ ಜಿಲ್ಲೆಗೆ ಅಗತ್ಯವಾಗಿ ಪರಿಹರಿಸಬೇಕಾಗಿರುವ ಕಾವೇರಿ ನೀರಿನ ಸಮಸ್ಯೆಗೆ ನ್ಯಾಯ ಒದಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಬಳಿ ಧನಿ ಎತ್ತಿ ಕಾವೇರಿ ನ್ಯಾಯ ಕೊಡಿಸುವುದೇ ನನ್ನ ಮುಂದಿನ ಕೆಲಸ. ವಾರದಲ್ಲಿ ಒಂದು ದಿನವಾದರು ಬಂದು ನಿಮ್ಮ ಸೇವೆ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನನ್ನನ್ನು ಬೆಳೆಸಿದ ಮಂಡ್ಯ ಜಿಲ್ಲೆಗೆ ನನ್ನ ಕೃತಜ್ಞತೆಗಳು ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಭಾವುಕರಾದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

8 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

8 hours ago

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

1 day ago