ಮಂಡ್ಯ

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ತಾಲ್ಲೂಕಿನ ಬಳಿಘಟ್ಟ ಗ್ರಾಮದಲ್ಲಿ ನೂತನ ರಾಮಮಂದಿರ, ಮಾರಮ್ಮದ ದೇವಸ್ಥಾನ, ಊಟದ ಹಾಲ್ ಉದ್ಘಾಟನೆ ಮಾಡಿ, ಗ್ರಾಮಸ್ಥರಿಂದ ಅಭಿನಂದನೆಸ್ವೀಕರಿಸಿ ಅವರು ಮಾತನಾಡಿದರು.
ಜಿಲ್ಲೆಯ ಜನತೆ ನನ್ನನ್ನು ಸಂಸದನಾಗಿ ಆಯ್ಕೆಮಾಡಿ, ಕೇಂದ್ರ ಸಚಿವನಾಗಿ ಕೆಲಸ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಜತೆಗೆ ಜಿಲ್ಲೆಯ ಜನತೆ ನನ್ನ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ನನ್ನ ಕೇಂದ್ರ ಸಚಿವ ಸ್ಥಾನದ ಅವಧಿ ಇನ್ನೂ ೩ ವರ್ಷಗಳ ಅವಧಿ ಇದೆ, ಮುಂದಿನ ವಿಧಾನಸಭೆ ಚುನಾವಣೆಗೆ ರಾಜ್ಯ ರಾಜಕಾರಣಕ್ಕೆ ಮರಳಬೇಕು ಎನ್ನುವುದು ಜನತೆಯ ಒತ್ತಾಯವಾಗಿದೆ. ಇನ್ನೂ ಎರಡು ವರ್ಷದ ಅವಧಿಯ ಒಳಗಾಗಿ ಜಿಲ್ಲೆಯ ಜನರ ನಿರೀಕ್ಷೆಯಂತೆ ಕೈಗಾರಿಕೆ ತರುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಜನಸೇವಕ ಸಿಎಸ್‌ಪಿ ಕೈಹಿಡಿಯಿರಿ:
ಮೇಲುಕೋಟೆ ಕ್ಷೇತ್ರದ ಜನತೆ ಜಾಗೃತರಾಗಬೇಕು, ಗೆದ್ದರೂ ಸೋತರೂ ಕ್ಷೇತ್ರದಲ್ಲಿ ಇದ್ದು ಕೆಲಸ ಮಾಡುವ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರನ್ನು ಚುನಾವಣೆಯ ಸಮಯದಲ್ಲಿ ಕೈಹಿಡಿಯಬೇಕು, ಅದನ್ನು ಬಿಟ್ಟು ಭಾರತ ಹಾಗೂ ಅಮೆರಿಕಕ್ಕೆ ಪ್ರವಾಸ ಮಾಡುವ ವ್ಯಕ್ತಿಯನ್ನು ಶಾಸಕರನ್ನಾಗಿ ಆಯ್ಕೆ ಮಾಡಿದ್ದೀರಿ. ಅವರು ಅಲ್ಲೊಂದು ಇಲ್ಲೊಂದು ಕಾರ್ಯಕ್ರಮದಲ್ಲಿ ಭಾಗಹಿಸುತ್ತಾರೆ. ಹೆಗಲ ಮೇಲೆ ಹಸಿರು ಟವಲ್ ಹಾಕಿಕೊಂಡು ರೈತರ ಧ್ವನಿಯಾಗಿ ಕೆಲಸ ಮಾಡಿದ್ದನ್ನು ನಾನೆಂದೂ ನೋಡಿಲ್ಲ ಎಂದ ಶಾಸಕ ದರ್ಶನ್ ಪುಟ್ಟಂಣ್ಣಯ್ಯ ಅವರನ್ನು ಪರೋಕ್ಷವಾಗಿ ಟೀಕಿಸಿದರು.

ಸಿ.ಎಸ್.ಪುಟ್ಟರಾಜು ಅವರು ಸಚಿವರಾಗಿದ್ದಾಗ ಕ್ಷೇತ್ರಕ್ಕೆ ರಸ್ತೆಗಳು, ನೀರಾವರಿ, ಶಿಕ್ಷಣ, ಆರೋಗ್ಯ ಸೇರಿದಂತೆ ಸಮಗ್ರ ಅಭಿವೃದ್ಧಿ ಮಾಡಿದ್ದಾರೆ. ಇಂತಹ ಜನಸೇವಕನನ್ನು ಕಳೆದುಕೊಳ್ಳಬೇಡಿ ಎಂದು ಮನವಿ ಮಾಡಿದರು.

 

ಆಂದೋಲನ ಡೆಸ್ಕ್

Recent Posts

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

55 mins ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

2 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

3 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

4 hours ago

ಚಾಮರಾಜನಗರ ಅರಣ್ಯ ವಲಯದಲ್ಲಿ ಹೆಚ್ಚಿದ ಬೇಟೆಗಾರರ ಹಾವಳಿ: 16 ವರ್ಷಗಳಲ್ಲಿ 3,289 ಪ್ರಕರಣ ದಾಖಲು..!

ಚಾಮರಾಜನಗರ: ಚಾಮರಾಜನಗರ ಅರಣ್ಯ ವಲಯದಲ್ಲಿ ಬೇಟೆಗಾರರ ಹಾವಳಿ ಹೆಚ್ಚಾಗಿದೆ. ಕಳೆದ 16 ವರ್ಷಗಳಲ್ಲಿ ಬರೋಬ್ಬರಿ 3,289 ವನ್ಯಜೀವಿ ಅಪರಾಧ ಪ್ರಕರಣಗಳು…

6 hours ago

ಹುಲಿ ನೋಡಲು ತೆರಳಿದ್ದ ಸಫಾರಿ ವಾಹನ ಅಪಘಾತ: 25 ಪ್ರವಾಸಿಗರಿಗೆ ಗಾಯ

ಎಚ್‌.ಡಿ.ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಸಫಾರಿಗೆ ತೆರಳಿದ್ದ ಪ್ರವಾಸಿಗರ ವಾಹನ ಅಪಘಾತಕ್ಕೀಡಾಗಿ, ಹಲವರಿಗೆ ಗಂಭೀರ ಗಾಯಗಳಾಗಿವೆ. ಸಫಾರಿಯಲ್ಲಿ ಹುಲಿ ಕಾಣಿಸಿಕೊಂಡಿರುವ…

8 hours ago