ಮಂಡ್ಯ

ಯಮ ಬಂದು ಕರೆದರೆ ಅಮ್ಮನ ಕೆಲಸ ಮುಗಿಸಿ ಬರುತ್ತೇನೆ ಎಂದು ಹೇಳುತ್ತೇನೆ; ಸುಮಲತಾ ಪರ ದರ್ಶನ್‌ ಬ್ಯಾಟಿಂಗ್‌

ಮಂಡ್ಯ: ಸಂಸದೆ ಸುಮಲತಾಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸುವ ಅವಕಾಶ ಕೈತಪ್ಪಿದ ಹಿನ್ನೆಲೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆಗಳು ಎದ್ದಿದ್ದವು. ಎಲ್ಲರ ಕುತೂಹಲಕ್ಕೆ ಇಂದು ( ಏಪ್ರಿಲ್‌ 3 ) ಸುಮಲತಾ ತಮ್ಮ ನಿಲುವನ್ನು ಬಹಿರಂಗಪಡಿಸುವ ಮೂಲಕ ತೆರೆಎಳೆದಿದ್ದಾರೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ, ಆದರೆ ಮಂಡ್ಯವನ್ನು ಯಾವುದೇ ಕಾರಣಕ್ಕೂ ಬಿಟ್ಟು ಹೋಗುವುದಿಲ್ಲ ಎಂದು ಸುಮಲತಾ ಅಂಬರೀಶ್‌ ಹೇಳಿದ್ದಾರೆ. ನಗರದ ಕಾಳಿಕಾಂಬ ದೇವಾಲಯದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಸುಮಲತಾ ಈ ನಿರ್ಧಾರವನ್ನು ಪ್ರಕಟಿಸಿದರು.

ಇನ್ನು ಕಳೆದ ಬಾರಿಯ ಚುನಾವಣೆಯಲ್ಲಿ ಸುಮಲತಾ ಅವರಿಗೆ ತೀವ್ರ ಬೆಂಬಲವನ್ನು ನೀಡಿದ್ದ ನಟ ದರ್ಶನ್‌ ಸಹ ಈ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದರು. ʼನನ್ನ ಸೆಲೆಬ್ರಿಟಿಗಳಿಗೆ, ಹಿರಿಯರಿಗೆ ನಮಸ್ಕಾರ. ಇದೇ ಐದು ವರ್ಷಗಳ ಹಿಂದೆ ಪ್ರಚಾರ ಮಾಡಲು ಬಂದಾಗ ಎಲ್ಲಾ ರೈತರು ಎಳೆನೀರು ಕೊಟ್ಟು ನನ್ನನ್ನು ತಣ್ಣಗೆ ಮಾಡಿದ್ದರು. ಅವರಿಗೆ ಧನ್ಯವಾದ. ಆರತಿ ಬೆಳಗಿದ ತಾಯಂದಿರಿಗೂ ನನ್ನ ಧನ್ಯವಾದʼ ಎಂದು ದರ್ಶನ್‌ ಮೊದಲಿಗೆ ಕಡೆಯ ಚುನಾವಣಾ ಪ್ರಚಾರದ ಸಂದರ್ಭವನ್ನು ಮೆಲುಕು ಹಾಕಿದರು.

ʼಯಮ ಕರೆದರೆ ಅಮ್ಮನ ಕೆಲಸ ಇದೆ ಮುಗಿಸಿ ಬರುತ್ತೇನೆ ಎಂದು ಎಂದು ಹೇಳುತ್ತೇನೆ. ಅವರ ಕುಟುಂಬದ ಜತೆಗಿನ ಬಾಂಧವ್ಯ ಅಂತಹದ್ದು. ಇವತ್ತು ಕೈಗೆ ಆಪರೇಷನ್‌ ಇತ್ತು. ಆದರೆ ಅಮ್ಮನ ಕೆಲಸ ಇದೆ ಎಂದು ಹೇಳಿ ಬಂದಿದ್ದೇನೆ. ಇಂದು ಸಂಜೆ ಅಡ್ಮಿಟ್‌ ಆಗಿ, ನಾಳೆ ಆಪರೇಷನ್‌ ಮಾಡಿಸಿಕೊಳ್ಳುತ್ತೇನೆʼ ಎಂದರು.

ʼಅಮ್ಮ ಏನೇ ನಿರ್ಧಾರ ತೆಗೆದುಕೊಂಡರೂ ನಾನು ಅವರ ಹಿಂದೆ ಇರುತ್ತೇನೆ. ತಾಯಿ ತಾಯಿನೇ. ಏನೇ ಹೇಳಿದ್ರೂ ನಾನು ಮಾಡುತ್ತೇನೆ. ಹಾಳು ಬಾವಿಗೆ ಬೀಳು ಅಂದ್ರೂ ಬೀಳುತ್ತೇನೆ. ನಾನು ಮತ್ತು ನನ್ನ ತಮ್ಮ ಅವರ ಮಾತಿಗೆ ಬದ್ಧವಾಗಿರುತ್ತೇವೆʼ ಎಂದು ಮಾತನಾಡಿದರು.

andolana

Recent Posts

ಮೈಸೂರು | 21 ರಂದು ಪಲ್ಸ್ ಪೋಲಿಯೋ ಅಭಿಯಾನ

ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ…

16 mins ago

ವೈದ್ಯ, ನರ್ಸ್‌ ಹುದ್ದೆ ಭರ್ತಿಗೆ ಒಂದು ತಿಂಗಳೊಳಗೆ ಕ್ರಮ : ಆರೋಗ್ಯ ಸಚಿವ ಗುಂಡೂರಾವ್‌

ಬೆಳಗಾವಿ : ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ…

39 mins ago

ಸುಪ್ರೀಂಕೋರ್ಟ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಹಿನ್ನಡೆ

ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…

1 hour ago

ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ: ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…

2 hours ago

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…

3 hours ago

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

3 hours ago