ಮಂಡ್ಯ

ಯಮ ಬಂದು ಕರೆದರೆ ಅಮ್ಮನ ಕೆಲಸ ಮುಗಿಸಿ ಬರುತ್ತೇನೆ ಎಂದು ಹೇಳುತ್ತೇನೆ; ಸುಮಲತಾ ಪರ ದರ್ಶನ್‌ ಬ್ಯಾಟಿಂಗ್‌

ಮಂಡ್ಯ: ಸಂಸದೆ ಸುಮಲತಾಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸುವ ಅವಕಾಶ ಕೈತಪ್ಪಿದ ಹಿನ್ನೆಲೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆಗಳು ಎದ್ದಿದ್ದವು. ಎಲ್ಲರ ಕುತೂಹಲಕ್ಕೆ ಇಂದು ( ಏಪ್ರಿಲ್‌ 3 ) ಸುಮಲತಾ ತಮ್ಮ ನಿಲುವನ್ನು ಬಹಿರಂಗಪಡಿಸುವ ಮೂಲಕ ತೆರೆಎಳೆದಿದ್ದಾರೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ, ಆದರೆ ಮಂಡ್ಯವನ್ನು ಯಾವುದೇ ಕಾರಣಕ್ಕೂ ಬಿಟ್ಟು ಹೋಗುವುದಿಲ್ಲ ಎಂದು ಸುಮಲತಾ ಅಂಬರೀಶ್‌ ಹೇಳಿದ್ದಾರೆ. ನಗರದ ಕಾಳಿಕಾಂಬ ದೇವಾಲಯದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಸುಮಲತಾ ಈ ನಿರ್ಧಾರವನ್ನು ಪ್ರಕಟಿಸಿದರು.

ಇನ್ನು ಕಳೆದ ಬಾರಿಯ ಚುನಾವಣೆಯಲ್ಲಿ ಸುಮಲತಾ ಅವರಿಗೆ ತೀವ್ರ ಬೆಂಬಲವನ್ನು ನೀಡಿದ್ದ ನಟ ದರ್ಶನ್‌ ಸಹ ಈ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದರು. ʼನನ್ನ ಸೆಲೆಬ್ರಿಟಿಗಳಿಗೆ, ಹಿರಿಯರಿಗೆ ನಮಸ್ಕಾರ. ಇದೇ ಐದು ವರ್ಷಗಳ ಹಿಂದೆ ಪ್ರಚಾರ ಮಾಡಲು ಬಂದಾಗ ಎಲ್ಲಾ ರೈತರು ಎಳೆನೀರು ಕೊಟ್ಟು ನನ್ನನ್ನು ತಣ್ಣಗೆ ಮಾಡಿದ್ದರು. ಅವರಿಗೆ ಧನ್ಯವಾದ. ಆರತಿ ಬೆಳಗಿದ ತಾಯಂದಿರಿಗೂ ನನ್ನ ಧನ್ಯವಾದʼ ಎಂದು ದರ್ಶನ್‌ ಮೊದಲಿಗೆ ಕಡೆಯ ಚುನಾವಣಾ ಪ್ರಚಾರದ ಸಂದರ್ಭವನ್ನು ಮೆಲುಕು ಹಾಕಿದರು.

ʼಯಮ ಕರೆದರೆ ಅಮ್ಮನ ಕೆಲಸ ಇದೆ ಮುಗಿಸಿ ಬರುತ್ತೇನೆ ಎಂದು ಎಂದು ಹೇಳುತ್ತೇನೆ. ಅವರ ಕುಟುಂಬದ ಜತೆಗಿನ ಬಾಂಧವ್ಯ ಅಂತಹದ್ದು. ಇವತ್ತು ಕೈಗೆ ಆಪರೇಷನ್‌ ಇತ್ತು. ಆದರೆ ಅಮ್ಮನ ಕೆಲಸ ಇದೆ ಎಂದು ಹೇಳಿ ಬಂದಿದ್ದೇನೆ. ಇಂದು ಸಂಜೆ ಅಡ್ಮಿಟ್‌ ಆಗಿ, ನಾಳೆ ಆಪರೇಷನ್‌ ಮಾಡಿಸಿಕೊಳ್ಳುತ್ತೇನೆʼ ಎಂದರು.

ʼಅಮ್ಮ ಏನೇ ನಿರ್ಧಾರ ತೆಗೆದುಕೊಂಡರೂ ನಾನು ಅವರ ಹಿಂದೆ ಇರುತ್ತೇನೆ. ತಾಯಿ ತಾಯಿನೇ. ಏನೇ ಹೇಳಿದ್ರೂ ನಾನು ಮಾಡುತ್ತೇನೆ. ಹಾಳು ಬಾವಿಗೆ ಬೀಳು ಅಂದ್ರೂ ಬೀಳುತ್ತೇನೆ. ನಾನು ಮತ್ತು ನನ್ನ ತಮ್ಮ ಅವರ ಮಾತಿಗೆ ಬದ್ಧವಾಗಿರುತ್ತೇವೆʼ ಎಂದು ಮಾತನಾಡಿದರು.

andolana

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

7 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

8 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

19 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

19 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

19 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

19 hours ago