Mysore
20
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಪ್ರಧಾನ ಮಂತ್ರಿ ಮಾಡಿದ್ರೂ ಬಿಜೆಪಿಗೆ ಹೋಗಲ್ಲ: ಸಿದ್ದರಾಮಯ್ಯ

ಮೈಸೂರು: ನನ್ನನ್ನು ರಾಷ್ಟ್ರಪತಿ, ಪ್ರಧಾನಿ ಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ. ರಾಜಕೀಯಕ್ಕೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು, ಆವಾಗ ರಾಜಕೀಯ ಶಕ್ತಿ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಮೈಸೂರು ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಪರಿಶಿಷ್ಟ ಜಾತಿ, ವರ್ಗಗಳ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶೂದ್ರ, ಮಹಿಳೆ, ದಲಿತರಿಗೆ ಆರ್‌ ಎಸ್‌ ಎಸ್‌ ಗರ್ಭಗುಡಿಯೊಳಗೆ ಪ್ರವೇಶ ಕೊಡಲ್ಲ. ಬಿಜೆಪಿ-ಆರ್‌ಎಸ್‌ಎಸ್‌ ಸಾಮಾಜಿಕ ನ್ಯಾಯದ ವಿರೋಧಿಯಾಗಿದೆ. ಹೀಗಾಗಿ ಅವರು ಮೀಸಲಾತಿಯನ್ನು ಇಷ್ಟಪಡುವುದಿಲ್ಲ ಎಂದರು.

ಮೋದಿ ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದಿದ್ದ ದೇವೇಗೌಡರು, ಈಗ ಮೋದಿಗೂ ತಮಗೂ ಅವಿನಾಭಾವ ಸಂಬಂಧ ಇದೆ ಎನ್ನುತ್ತಿದ್ದಾರೆ. ರಾಜಕಾರಣಿಯಾದವರಿಗೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು ಎಂದು ಹೇಳಿದರು.

Tags:
error: Content is protected !!