ಮಂಡ್ಯ: ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ, ಅದು ಸಾಮಾನ್ಯ ನಾಗರಿಕರು, ರೈತರು, ಬಡವರು, ಕಾರ್ಮಿಕರು ಮತ್ತು ವ್ಯಾಪರಿಗಳ ಸರ್ಕಾರವಾಗಿರುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಇಂದು(ಏ.17) ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಬಿಜೆಪಿ ಸರ್ಕಾರ ಕೇವಲ 25 ಶ್ರೀಮಂತರಿಗಾಗಿ ಕೆಲಸ ಮಾಡುತ್ತಿದೆ. ಆದರೆ ಕಾಂಗ್ರೆಸ್ ಸಾಮಾನ್ಯ ನಾಗರಿಕರು, ರೈತರು, ಕಾರ್ಮಿಕರು ಮತ್ತು ವ್ಯಾಪಾರಿಗಳಿಗಾಗಿ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತದೆ ಎಂದರು.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ರೈತರ ಸಾಲ ಮನ್ನಾ ಮಾಡುತ್ತೇವೆ ಮತ್ತು ರಾಜ್ಯದಲ್ಲಿ ಬಡ ಮಹಿಳೆಯರಿಗೆ ಈಗಾಗಲೇ ನೀಡುತ್ತಿರುವ 24 ಸಾವಿರಕ್ಕೆ 1 ಲಕ್ಷ ರೂ. ಸೇರಿಸಿ 1 ಲಕ್ಷದ 24 ಸಾವಿರ ರೂಪಾಯಿ ನೀಡುತ್ತೇವೆ. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಿಸುತ್ತೇವೆ. ಸರ್ಕಾರಿ, ಅರೆ ಸರ್ಕಾರಿ ನೌಕರರ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸುತ್ತೇವೆ. ಜೊತೆಗೆ ಉದ್ಯೋಗ ಭದ್ರತಾ ಯೋಜನೆ ಜಾರಿ ಮಾಡುತ್ತೇವೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಮಹಿಳೆಯರಿಗೆ, ಯುವಕರಿಗೆ ಅನುಕೂಲವಾಗಿದೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ರೈತರಿಗೆ ನ್ಯಾಯ ಸಿಕ್ಕಿಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ಮಾಡಿದ್ದು, ಈ ವೇಳೆ ರೈತರ ಸಂಕಷ್ಟ ನೋಡಿದ್ದೇನೆ ಎಂದರು.
ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…
ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…
ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…
ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್…
ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…
ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…