ಮಂಡ್ಯ: ಯಾವುದೇ ಒತ್ತಡಕ್ಕೆ ಮಣಿದರೆ ನಾನೇ ಮದ್ದೂರಿಗೆ ಬರಬೇಕಾಗುತ್ತದೆ ಎಂದು ಮಂಡ್ಯ ಎಸ್ಪಿಗೆ ಕರೆ ಮಾಡಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಹಾಗೂ ಡಿಸಿಗೆ ಕರೆ ಮಾಡಿ ಮಾತನಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಬೇಕು. ಯಾವುದೇ ಒತ್ತಡಕ್ಕೆ ಮಣಿದರೆ ಖುದ್ದಾಗಿ ನಾನೇ ಮದ್ದೂರಿಗೆ ಬರಬೇಕಾಗುತ್ತದೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ.
ಮದ್ದೂರು ಪಟ್ಟಣದ ರಾಮ್ ರಹೀಂ ನಗರದಲ್ಲಿ ಕಳೆದ ತಡರಾತ್ರಿ ಗಣಪತಿ ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ಮಸೀದಿ ಬಳಿಗೆ ಮರವಣಿಗೆ ಬಂದಿದ್ದು, ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಎಚ್ಚರಿಕೆ ನೀಡಿದ್ದರು. ಅದರಂತೆ ಮೈಕ್ ಆಫ್ ಮಾಡಿ ಮೆರವಣಿಗೆ ಮಾಡಲಾಗಿತ್ತು. ಇದಾದ ಬಳಿಕ ಲೈಟ್ ಆಫ್ ಮಾಡಿ ಏಕಾಏಕಿ ಗಣಪತಿ ಮೆರವಣಿಗೆಗೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದ ಬೆನ್ನಲ್ಲೇ ಪ್ರತಿಭಟನೆ ಜೋರಾಗಿ ನಡೆದಿದ್ದು, ಮದ್ದೂರಿನಲ್ಲಿ ನಾಳೆಯವರೆಗೂ ನಿಷೇಧಾಜ್ಞೆ ಜಾರಿಯಾಗಿದೆ.
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…