ಮಂಡ್ಯ: ಯಾವುದೇ ಒತ್ತಡಕ್ಕೆ ಮಣಿದರೆ ನಾನೇ ಮದ್ದೂರಿಗೆ ಬರಬೇಕಾಗುತ್ತದೆ ಎಂದು ಮಂಡ್ಯ ಎಸ್ಪಿಗೆ ಕರೆ ಮಾಡಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಹಾಗೂ ಡಿಸಿಗೆ ಕರೆ ಮಾಡಿ ಮಾತನಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಬೇಕು. ಯಾವುದೇ ಒತ್ತಡಕ್ಕೆ ಮಣಿದರೆ ಖುದ್ದಾಗಿ ನಾನೇ ಮದ್ದೂರಿಗೆ ಬರಬೇಕಾಗುತ್ತದೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ.
ಮದ್ದೂರು ಪಟ್ಟಣದ ರಾಮ್ ರಹೀಂ ನಗರದಲ್ಲಿ ಕಳೆದ ತಡರಾತ್ರಿ ಗಣಪತಿ ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ಮಸೀದಿ ಬಳಿಗೆ ಮರವಣಿಗೆ ಬಂದಿದ್ದು, ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಎಚ್ಚರಿಕೆ ನೀಡಿದ್ದರು. ಅದರಂತೆ ಮೈಕ್ ಆಫ್ ಮಾಡಿ ಮೆರವಣಿಗೆ ಮಾಡಲಾಗಿತ್ತು. ಇದಾದ ಬಳಿಕ ಲೈಟ್ ಆಫ್ ಮಾಡಿ ಏಕಾಏಕಿ ಗಣಪತಿ ಮೆರವಣಿಗೆಗೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದ ಬೆನ್ನಲ್ಲೇ ಪ್ರತಿಭಟನೆ ಜೋರಾಗಿ ನಡೆದಿದ್ದು, ಮದ್ದೂರಿನಲ್ಲಿ ನಾಳೆಯವರೆಗೂ ನಿಷೇಧಾಜ್ಞೆ ಜಾರಿಯಾಗಿದೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…