ಮಂಡ್ಯ: ಯಾವುದೇ ಒತ್ತಡಕ್ಕೆ ಮಣಿದರೆ ನಾನೇ ಮದ್ದೂರಿಗೆ ಬರಬೇಕಾಗುತ್ತದೆ ಎಂದು ಮಂಡ್ಯ ಎಸ್ಪಿಗೆ ಕರೆ ಮಾಡಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಹಾಗೂ ಡಿಸಿಗೆ ಕರೆ ಮಾಡಿ ಮಾತನಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಬೇಕು. ಯಾವುದೇ ಒತ್ತಡಕ್ಕೆ ಮಣಿದರೆ ಖುದ್ದಾಗಿ ನಾನೇ ಮದ್ದೂರಿಗೆ ಬರಬೇಕಾಗುತ್ತದೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ.
ಮದ್ದೂರು ಪಟ್ಟಣದ ರಾಮ್ ರಹೀಂ ನಗರದಲ್ಲಿ ಕಳೆದ ತಡರಾತ್ರಿ ಗಣಪತಿ ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ಮಸೀದಿ ಬಳಿಗೆ ಮರವಣಿಗೆ ಬಂದಿದ್ದು, ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಎಚ್ಚರಿಕೆ ನೀಡಿದ್ದರು. ಅದರಂತೆ ಮೈಕ್ ಆಫ್ ಮಾಡಿ ಮೆರವಣಿಗೆ ಮಾಡಲಾಗಿತ್ತು. ಇದಾದ ಬಳಿಕ ಲೈಟ್ ಆಫ್ ಮಾಡಿ ಏಕಾಏಕಿ ಗಣಪತಿ ಮೆರವಣಿಗೆಗೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದ ಬೆನ್ನಲ್ಲೇ ಪ್ರತಿಭಟನೆ ಜೋರಾಗಿ ನಡೆದಿದ್ದು, ಮದ್ದೂರಿನಲ್ಲಿ ನಾಳೆಯವರೆಗೂ ನಿಷೇಧಾಜ್ಞೆ ಜಾರಿಯಾಗಿದೆ.
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…