ನವದೆಹಲಿ: ಮಂಡ್ಯ ಕಣಕ್ಕಾಗಿ ಸಂಸದೆ ಸುಮಲತಾ ಅಂಬರೀಶ್ ಮತ್ತು ಜೆಡಿಎಸ್ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ. ಇಂದು (ಮಾರ್ಚ್ 18) ಬಿಜೆಪಿ ರಾಷ್ಟ್ರೀಯ ನಾಯಕ ಜೆಪಿ ನಡ್ಡಾ ಅವರನ್ನು ಭೇಟಿಯಾಗಿರುವ ಸುಮಾಲತಾ ಅಂಬರೀಶ್ ಮಂಡ್ಯದ ಸೀಟು ಹಂಚಿಕೆ ಇನ್ನೂ ಅಂತಿಮವಾಗಿಲ್ಲ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.
ಒಂದು ಸುದೀರ್ಘವಾದ ಚರ್ಚೆ ನಡೆಯಿತು. ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಜೊತೆ ಮಾತುಕತೆ ಮುಕ್ತಾಯವಾಗಿದೆ. ಮಂಡ್ಯದ ಬಗ್ಗೆ ಇನ್ನು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮಂಡ್ಯ ಕ್ಷೇತ್ರದಿಂದಲೇ ಟಿಕೆಟ್ ಕೊಡಲು ನಾನು ಕೇಳಿದ್ದೇನೆ. ಮೋದಿಯವರು ನನಗೆ ಭರವಸೆ ನೀಡಿದ್ದಾರೆ. ನಿಮ್ಮನ್ನ ಮತ್ತು ನಿಮ್ಮ ಕಾರ್ಯಕರ್ತರನ್ನ ಯಾವುದೇ ಕಾರಣಕ್ಕೂ ಕೈಬಿಡುವ ಪ್ರಶ್ನೆ ಇಲ್ಲ ಎಂದು ಭರವಸೆ ನೀಡಿದ್ದಾರೆ ಎಂದರು.
ನನ್ನ ಮುಂದಿನ ನಿರ್ಧಾರವನ್ನ ಕ್ಷೇತ್ರಕ್ಕೆ ತೆರಳಿ ನಮ್ಮ ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇನೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿಯಿಂದ ದೂರ ಹೋಗುವ ಪ್ರಶ್ನೆ ಇಲ್ಲ. ನಾನು ಸ್ಪರ್ಧೆ ಮಾಡಬೇಕು ಎನ್ನುವುದಕ್ಕಿಂತ ಮಂಡ್ಯದಲ್ಲಿ ಸ್ಪರ್ಧೆ ಮಾಡಬೇಕು. ಮಂಡ್ಯದಲ್ಲಿ ಸ್ಪರ್ಧೆ ಮಾಡಿದರೇ ಬಿಜೆಪಿ ಬೇಸ್ ಉಳಿಯಲಿದೆ ಎಂದರು.
ಜೊತೆಗೆ ನನ್ನ ಸಂಸತ್ ಅವಧಿ ಮುಕ್ತಾಯದ ನಂತರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…