ಮಂಡ್ಯ: ರಾಜ್ಯದ ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಸಂಬಂಧ ಎ.ಜೆ.ಸದಾಶಿವ ಆಯೋಗದ ವರದಿ ಹಾಗೂ ಜಾತಿ ಜನಗಣತಿ, ಹೆಚ್.ಕಾಂತರಾಜ್ ಆಯೋಗದ ವರದಿಗಳನ್ನು ಜಾರಿ ಮಾಡುವಂತೆ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ವೆಂಕಟಗಿರಿಯಯ್ಯ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿ ಮಾಡುವಂತೆ ಸುಪ್ರೀಂ ನ್ಯಾಯಾಲಯ ಆದೇಶ ನೀಡಿದ್ದರೂ ರಾಜ್ಯ ಸರ್ಕಾರ ಜಾರಿಗೆ ಮುಂದಾಗದೇ ಇದುರುವುದು ಸರಿಯಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೆಚ್.ಕಾಂತರಾಜು ಆಯೋಗ ರಚಿಸಿ ಜಾತಿ ಗಣತಿ ನಡೆಸಿದ್ದು, ಯಾವ ಜಾತಿ ಶೈಕ್ಷಣಿಕ, ಆರ್ಥಿಕ, ಅಭಿವೃದ್ಧಿ ಹೀನವಾಗಿದೆ ಎಂಬುದನ್ನು ಗುರುತಿಸಿದ್ದು ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಈ ವರದಿಗಳ ಬಗ್ಗೆ ಸಚಿವ ಸಂಪುಟ ಹಾಗೂ ವಿಧಾನಸಭೆಯಲ್ಲಿ ಚರ್ಚಿಸಿ ಶೋಷಿತ ಸಮುದಾಯಕ್ಕೆ ಸಮಬಾಲು, ಸಮಪಾಲು ನೀಡುವ ಗುರುತರ ಜವಾಬ್ದಾರಿ ಮೆರೆಯುವಂತೆ ಆಗ್ರಹಿಸಿದರು.
ರಾಜ್ಯ ಸರ್ಕಾರವು ತಳಸಮುದಾಯಗಳ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ನಾಶ ಮಾಡುಲು ಹೋರಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಾತಿ ಜನಗಣತಿ ವರದಿ ಮತ್ತು ಒಳ ಮೀಸಲಾತಿ ವರದಿಯನ್ನು ಜಾರಿ ಮಾಡಬೇಕು ಇಲ್ಲವಾದರೆ ಖುರ್ಚಿ ಕಾಲಿ ಮಾಡುವಂತೆ ಒತ್ತಾಯಿಸಿದರು.
ಡಿ.೦೬ರಂದು ಅಂಬೇಡ್ಕರ್ ೬೨ನೇ ಪರಿನಿಬ್ಬಾಣ ದಿನ ನಡೆಯುವುದರ ಒಳಗಾಗಿ ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಹಾಗೂ ಜಾತಿ ಗಣತಿಯ ವರದಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಅನಿಲ್ಕುಮಾರ್ ಕೆರಗೋಡು, ಉಪಾಧ್ಯಕ್ಷ ಬಿ.ಆನಂದ್, ಪುಟ್ಟಸ್ವಾಮಿ, ಮುತ್ತುರಾಜ್ ಇದ್ದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…