ಮಂಡ್ಯ: ರಾಜ್ಯದ ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಸಂಬಂಧ ಎ.ಜೆ.ಸದಾಶಿವ ಆಯೋಗದ ವರದಿ ಹಾಗೂ ಜಾತಿ ಜನಗಣತಿ, ಹೆಚ್.ಕಾಂತರಾಜ್ ಆಯೋಗದ ವರದಿಗಳನ್ನು ಜಾರಿ ಮಾಡುವಂತೆ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ವೆಂಕಟಗಿರಿಯಯ್ಯ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿ ಮಾಡುವಂತೆ ಸುಪ್ರೀಂ ನ್ಯಾಯಾಲಯ ಆದೇಶ ನೀಡಿದ್ದರೂ ರಾಜ್ಯ ಸರ್ಕಾರ ಜಾರಿಗೆ ಮುಂದಾಗದೇ ಇದುರುವುದು ಸರಿಯಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೆಚ್.ಕಾಂತರಾಜು ಆಯೋಗ ರಚಿಸಿ ಜಾತಿ ಗಣತಿ ನಡೆಸಿದ್ದು, ಯಾವ ಜಾತಿ ಶೈಕ್ಷಣಿಕ, ಆರ್ಥಿಕ, ಅಭಿವೃದ್ಧಿ ಹೀನವಾಗಿದೆ ಎಂಬುದನ್ನು ಗುರುತಿಸಿದ್ದು ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಈ ವರದಿಗಳ ಬಗ್ಗೆ ಸಚಿವ ಸಂಪುಟ ಹಾಗೂ ವಿಧಾನಸಭೆಯಲ್ಲಿ ಚರ್ಚಿಸಿ ಶೋಷಿತ ಸಮುದಾಯಕ್ಕೆ ಸಮಬಾಲು, ಸಮಪಾಲು ನೀಡುವ ಗುರುತರ ಜವಾಬ್ದಾರಿ ಮೆರೆಯುವಂತೆ ಆಗ್ರಹಿಸಿದರು.
ರಾಜ್ಯ ಸರ್ಕಾರವು ತಳಸಮುದಾಯಗಳ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ನಾಶ ಮಾಡುಲು ಹೋರಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಾತಿ ಜನಗಣತಿ ವರದಿ ಮತ್ತು ಒಳ ಮೀಸಲಾತಿ ವರದಿಯನ್ನು ಜಾರಿ ಮಾಡಬೇಕು ಇಲ್ಲವಾದರೆ ಖುರ್ಚಿ ಕಾಲಿ ಮಾಡುವಂತೆ ಒತ್ತಾಯಿಸಿದರು.
ಡಿ.೦೬ರಂದು ಅಂಬೇಡ್ಕರ್ ೬೨ನೇ ಪರಿನಿಬ್ಬಾಣ ದಿನ ನಡೆಯುವುದರ ಒಳಗಾಗಿ ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಹಾಗೂ ಜಾತಿ ಗಣತಿಯ ವರದಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಅನಿಲ್ಕುಮಾರ್ ಕೆರಗೋಡು, ಉಪಾಧ್ಯಕ್ಷ ಬಿ.ಆನಂದ್, ಪುಟ್ಟಸ್ವಾಮಿ, ಮುತ್ತುರಾಜ್ ಇದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…