ಮಂಡ್ಯ

ಜಾತಿ ಜನಗಣತಿ ವರದಿ ಜಾರಿಗೊಳಿಸಿ: ವೆಂಕಟಗಿರಿಯಯ್ಯ ಒತ್ತಾಯ

ಮಂಡ್ಯ: ರಾಜ್ಯದ ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಸಂಬಂಧ ಎ.ಜೆ.ಸದಾಶಿವ ಆಯೋಗದ ವರದಿ ಹಾಗೂ ಜಾತಿ ಜನಗಣತಿ, ಹೆಚ್.ಕಾಂತರಾಜ್ ಆಯೋಗದ ವರದಿಗಳನ್ನು ಜಾರಿ ಮಾಡುವಂತೆ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ವೆಂಕಟಗಿರಿಯಯ್ಯ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿ ಮಾಡುವಂತೆ ಸುಪ್ರೀಂ ನ್ಯಾಯಾಲಯ ಆದೇಶ ನೀಡಿದ್ದರೂ ರಾಜ್ಯ ಸರ್ಕಾರ ಜಾರಿಗೆ ಮುಂದಾಗದೇ ಇದುರುವುದು ಸರಿಯಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೆಚ್.ಕಾಂತರಾಜು ಆಯೋಗ ರಚಿಸಿ ಜಾತಿ ಗಣತಿ ನಡೆಸಿದ್ದು, ಯಾವ ಜಾತಿ ಶೈಕ್ಷಣಿಕ, ಆರ್ಥಿಕ, ಅಭಿವೃದ್ಧಿ ಹೀನವಾಗಿದೆ ಎಂಬುದನ್ನು ಗುರುತಿಸಿದ್ದು ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಈ ವರದಿಗಳ ಬಗ್ಗೆ ಸಚಿವ ಸಂಪುಟ ಹಾಗೂ ವಿಧಾನಸಭೆಯಲ್ಲಿ ಚರ್ಚಿಸಿ ಶೋಷಿತ ಸಮುದಾಯಕ್ಕೆ ಸಮಬಾಲು, ಸಮಪಾಲು ನೀಡುವ ಗುರುತರ ಜವಾಬ್ದಾರಿ ಮೆರೆಯುವಂತೆ ಆಗ್ರಹಿಸಿದರು.

ರಾಜ್ಯ ಸರ್ಕಾರವು ತಳಸಮುದಾಯಗಳ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ನಾಶ ಮಾಡುಲು ಹೋರಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಾತಿ ಜನಗಣತಿ ವರದಿ ಮತ್ತು ಒಳ ಮೀಸಲಾತಿ ವರದಿಯನ್ನು ಜಾರಿ ಮಾಡಬೇಕು ಇಲ್ಲವಾದರೆ ಖುರ್ಚಿ ಕಾಲಿ ಮಾಡುವಂತೆ ಒತ್ತಾಯಿಸಿದರು.

ಡಿ.೦೬ರಂದು ಅಂಬೇಡ್ಕರ್ ೬೨ನೇ ಪರಿನಿಬ್ಬಾಣ ದಿನ ನಡೆಯುವುದರ ಒಳಗಾಗಿ ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಹಾಗೂ ಜಾತಿ ಗಣತಿಯ ವರದಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಕೆರಗೋಡು, ಉಪಾಧ್ಯಕ್ಷ ಬಿ.ಆನಂದ್, ಪುಟ್ಟಸ್ವಾಮಿ, ಮುತ್ತುರಾಜ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

14 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

3 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

15 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

16 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

17 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

18 hours ago