ಮಂಡ್ಯ: ರಾಜ್ಯದ ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಸಂಬಂಧ ಎ.ಜೆ.ಸದಾಶಿವ ಆಯೋಗದ ವರದಿ ಹಾಗೂ ಜಾತಿ ಜನಗಣತಿ, ಹೆಚ್.ಕಾಂತರಾಜ್ ಆಯೋಗದ ವರದಿಗಳನ್ನು ಜಾರಿ ಮಾಡುವಂತೆ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ವೆಂಕಟಗಿರಿಯಯ್ಯ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿ ಮಾಡುವಂತೆ ಸುಪ್ರೀಂ ನ್ಯಾಯಾಲಯ ಆದೇಶ ನೀಡಿದ್ದರೂ ರಾಜ್ಯ ಸರ್ಕಾರ ಜಾರಿಗೆ ಮುಂದಾಗದೇ ಇದುರುವುದು ಸರಿಯಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೆಚ್.ಕಾಂತರಾಜು ಆಯೋಗ ರಚಿಸಿ ಜಾತಿ ಗಣತಿ ನಡೆಸಿದ್ದು, ಯಾವ ಜಾತಿ ಶೈಕ್ಷಣಿಕ, ಆರ್ಥಿಕ, ಅಭಿವೃದ್ಧಿ ಹೀನವಾಗಿದೆ ಎಂಬುದನ್ನು ಗುರುತಿಸಿದ್ದು ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಈ ವರದಿಗಳ ಬಗ್ಗೆ ಸಚಿವ ಸಂಪುಟ ಹಾಗೂ ವಿಧಾನಸಭೆಯಲ್ಲಿ ಚರ್ಚಿಸಿ ಶೋಷಿತ ಸಮುದಾಯಕ್ಕೆ ಸಮಬಾಲು, ಸಮಪಾಲು ನೀಡುವ ಗುರುತರ ಜವಾಬ್ದಾರಿ ಮೆರೆಯುವಂತೆ ಆಗ್ರಹಿಸಿದರು.
ರಾಜ್ಯ ಸರ್ಕಾರವು ತಳಸಮುದಾಯಗಳ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ನಾಶ ಮಾಡುಲು ಹೋರಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಾತಿ ಜನಗಣತಿ ವರದಿ ಮತ್ತು ಒಳ ಮೀಸಲಾತಿ ವರದಿಯನ್ನು ಜಾರಿ ಮಾಡಬೇಕು ಇಲ್ಲವಾದರೆ ಖುರ್ಚಿ ಕಾಲಿ ಮಾಡುವಂತೆ ಒತ್ತಾಯಿಸಿದರು.
ಡಿ.೦೬ರಂದು ಅಂಬೇಡ್ಕರ್ ೬೨ನೇ ಪರಿನಿಬ್ಬಾಣ ದಿನ ನಡೆಯುವುದರ ಒಳಗಾಗಿ ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಹಾಗೂ ಜಾತಿ ಗಣತಿಯ ವರದಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಅನಿಲ್ಕುಮಾರ್ ಕೆರಗೋಡು, ಉಪಾಧ್ಯಕ್ಷ ಬಿ.ಆನಂದ್, ಪುಟ್ಟಸ್ವಾಮಿ, ಮುತ್ತುರಾಜ್ ಇದ್ದರು.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…