ಮಂಡ್ಯ: ರಾಜ್ಯದ ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಸಂಬಂಧ ಎ.ಜೆ.ಸದಾಶಿವ ಆಯೋಗದ ವರದಿ ಹಾಗೂ ಜಾತಿ ಜನಗಣತಿ, ಹೆಚ್.ಕಾಂತರಾಜ್ ಆಯೋಗದ ವರದಿಗಳನ್ನು ಜಾರಿ ಮಾಡುವಂತೆ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ವೆಂಕಟಗಿರಿಯಯ್ಯ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿ ಮಾಡುವಂತೆ ಸುಪ್ರೀಂ ನ್ಯಾಯಾಲಯ ಆದೇಶ ನೀಡಿದ್ದರೂ ರಾಜ್ಯ ಸರ್ಕಾರ ಜಾರಿಗೆ ಮುಂದಾಗದೇ ಇದುರುವುದು ಸರಿಯಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೆಚ್.ಕಾಂತರಾಜು ಆಯೋಗ ರಚಿಸಿ ಜಾತಿ ಗಣತಿ ನಡೆಸಿದ್ದು, ಯಾವ ಜಾತಿ ಶೈಕ್ಷಣಿಕ, ಆರ್ಥಿಕ, ಅಭಿವೃದ್ಧಿ ಹೀನವಾಗಿದೆ ಎಂಬುದನ್ನು ಗುರುತಿಸಿದ್ದು ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಈ ವರದಿಗಳ ಬಗ್ಗೆ ಸಚಿವ ಸಂಪುಟ ಹಾಗೂ ವಿಧಾನಸಭೆಯಲ್ಲಿ ಚರ್ಚಿಸಿ ಶೋಷಿತ ಸಮುದಾಯಕ್ಕೆ ಸಮಬಾಲು, ಸಮಪಾಲು ನೀಡುವ ಗುರುತರ ಜವಾಬ್ದಾರಿ ಮೆರೆಯುವಂತೆ ಆಗ್ರಹಿಸಿದರು.
ರಾಜ್ಯ ಸರ್ಕಾರವು ತಳಸಮುದಾಯಗಳ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ನಾಶ ಮಾಡುಲು ಹೋರಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಾತಿ ಜನಗಣತಿ ವರದಿ ಮತ್ತು ಒಳ ಮೀಸಲಾತಿ ವರದಿಯನ್ನು ಜಾರಿ ಮಾಡಬೇಕು ಇಲ್ಲವಾದರೆ ಖುರ್ಚಿ ಕಾಲಿ ಮಾಡುವಂತೆ ಒತ್ತಾಯಿಸಿದರು.
ಡಿ.೦೬ರಂದು ಅಂಬೇಡ್ಕರ್ ೬೨ನೇ ಪರಿನಿಬ್ಬಾಣ ದಿನ ನಡೆಯುವುದರ ಒಳಗಾಗಿ ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಹಾಗೂ ಜಾತಿ ಗಣತಿಯ ವರದಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಅನಿಲ್ಕುಮಾರ್ ಕೆರಗೋಡು, ಉಪಾಧ್ಯಕ್ಷ ಬಿ.ಆನಂದ್, ಪುಟ್ಟಸ್ವಾಮಿ, ಮುತ್ತುರಾಜ್ ಇದ್ದರು.
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…