ಮಂಡ್ಯ

2024 ರ ಜನವರಿಯಲ್ಲಿ ಅಯೋಧ್ಯ ಶ್ರೀರಾಮ ಮಂದಿರ ಲೋಕಾರ್ಪಣೆ : ಯೋಗಿ ಆದಿತ್ಯನಾಥ್

ಮಂಡ್ಯ : ವಿಶ್ವದಲ್ಲಿ ಎಲ್ಲೇ ಹನುಮಂತನ ದೇವಸ್ಥಾನ ಇದ್ದರೂ ಅಲ್ಲಿ ಶ್ರೀರಾಮನ ದೇವಸ್ಥಾನ ನಿರ್ಮಾಣ ಮಾಡುವುದು ಶತಃಸಿದ್ಧ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಘೋಷಿಸಿದರು.
ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಡೆದ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹನುಮಂತನಿಗೂ-ಶ್ರೀರಾಮನಿಗೂ ಅವಿನಾಭಾವ ಸಂಬಂಧವಿದೆ. ಆದ್ದರಿಂದಲೇ ನಾವು ಮಂದಿರ ನಿರ್ಮಾಣ ಮಾಡುತ್ತಿದ್ದೇವೆ ಎಂದು ಹೇಳಿದರು.

2024 ರ ಜನವರಿಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ : ಉತ್ತರ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರವನ್ನು 2024 ರ ಜನವರಿಯಲ್ಲಿ ನಾವು ಲೋಕಾರ್ಪಣೆ ಮಾಡುತ್ತೇವೆ. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಯೋಧ್ಯೆಯಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಜಾಗ ಕೇಳಿದ್ದರು. ನಾವು ಕರ್ನಾಟಕ ಭವನ ನಿರ್ಮಾಣಕ್ಕೆ ಜಾಗ ಕೊಟ್ಟಿದ್ದೇವೆ.ಎಲ್ಲರೂ ಬಂದು ರಾಮ ಮಂದಿರ ವೀಕ್ಷಣೆ ಮಾಡಬೇಕು ಎಂದು ಕರೆ ನೀಡಿದರು.

ಯುಪಿ-ಕರ್ನಾಟಕಕ್ಕೆ ಅವಿನಾಭಾವ ಸಂಬಂಧ : ಉತ್ತರ ಪ್ರದೇಶ ಮತ್ತು ಕರ್ನಾಟಕಕ್ಕೂ ಅವಿನಾಭಾವ ಸಂಬಂಧ ಇದೆ. ತ್ರೇತಾಯುಗದಲ್ಲಿ ಶ್ರೀರಾಮ ವನವಾಸಕ್ಕೆ ಕರ್ನಾಟಕಕ್ಕೆ ಬಂದಾಗ ಹನುಮಂತ ಕರ್ನಾಟಕದಲ್ಲೇ ಸಿಕ್ಕಿದ್ದು. ಈ ಹಿನ್ನೆಲೆಯಲ್ಲಿ ಭಕ್ತ ಮತ್ತು ಸ್ವಾಮಿಯ ಸಂಬಂಧದ ರೀತಿಯಲ್ಲಿದೆ ಎಂದು ಹೇಳಿದರು.

lokesh

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

4 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

4 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

4 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

4 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

4 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

4 hours ago