Mysore
26
overcast clouds

Social Media

ಬುಧವಾರ, 13 ಮೇ 2026
Light
Dark

ಮದ್ದೂರು ಉತ್ಸವಕ್ಕೆ ವಿಧ್ಯುಕ್ತ ಚಾಲನೆ

ಮದ್ದೂರು : ಐತಿಹಾಸಿಕ ಮದ್ದೂರು ಉತ್ಸವ-2026ಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ವಿಧ್ಯುಕ್ತ ಚಾಲನೆ ನೀಡಿದರು.

ದೀಪ ಬೆಳಗಿಸಿ ಉತ್ಸವ ಉದ್ಘಾಟಿಸಿ ಮಾತನಾಡಿದ ಸಚಿವರು, “ಮದ್ದೂರು ಕೇವಲ ಭೌಗೋಳಿಕ ಗಡಿಯಲ್ಲ, ಇದು ತ್ಯಾಗರಾಜರ ನಾಡು, ಇತಿಹಾಸದ ಪುಟಗಳಲ್ಲಿ ದಾಖಲಾದ ಪುಣ್ಯಭೂಮಿ. ನಮ್ಮ ಜಾನಪದ, ಕಲೆ, ಕೃಷಿ ಸಂಸ್ಕೃತಿಯನ್ನು ಜಗತ್ತಿಗೆ ಸಾರಲು ಇಂತಹ ಉತ್ಸವಗಳು ಸೇತುವೆಯಾಗಬೇಕು. ಸಂಸ್ಕೃತಿ ಉಳಿಸಿ ಬೆಳೆಸುವುದು ಸರ್ಕಾರದ ಆದ್ಯ ಕರ್ತವ್ಯ” ಎಂದು ಪ್ರತಿಪಾದಿಸಿದರು.

“ರೈತರಿಲ್ಲದೆ ಉತ್ಸವವಿಲ್ಲ. ಕೃಷಿ ಮೇಳದ ಮೂಲಕ ನಮ್ಮ ಅನ್ನದಾತರಿಗೆ ಹೊಸ ತಂತ್ರಜ್ಞಾನ ಪರಿಚಯಿಸುತ್ತಿದ್ದೇವೆ. ಯುವಕರು ಕೃಷಿಯತ್ತ ಒಲವು ತೋರಿಸಬೇಕು” ಎಂದು ಸಚಿವ ಚಲುವರಾಯಸ್ವಾಮಿ ಕರೆ ನೀಡಿದರು.

ಪ್ರಮುಖ ಘೋಷಣೆಗಳು:
“ಮದ್ದೂರು ಉತ್ಸವವನ್ನು ಮುಂದಿನ ವರ್ಷದಿಂದ ರಾಜ್ಯಮಟ್ಟದ ಉತ್ಸವವನ್ನಾಗಿ ಆಚರಿಸಲು ಕ್ರಮ ಕೈಗೊಳ್ಳಲಾಗುವುದು.”
“ಸ್ಥಳೀಯ ಕಲಾವಿದರಿಗೆ ಶಾಶ್ವತ ವೇದಿಕೆ ನಿರ್ಮಿಸಲು 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು.”
“ಮದ್ದೂರು ಕೆರೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಿ, ದೋಣಿ ವಿಹಾರಕ್ಕೆ ವ್ಯವಸ್ಥೆ ಮಾಡಲಾಗುವುದು.”

ಈ ಸಂದರ್ಭದಲ್ಲಿ ಜಾನಪದ ಕಲಾವಿದೆ ಲಕ್ಷ್ಮಮ್ಮ, ಕೃಷಿ ಸಾಧಕ ಪುಟ್ಟಸ್ವಾಮಿ ಸೇರಿದಂತೆ 15 ಸಾಧಕರನ್ನು ಸಚಿವರು ಸನ್ಮಾನಿಸಿದರು. ಶಾಲಾ ಮಕ್ಕಳ ‘ಕಾವೇರಿ ಆರತಿ’ ನೃತ್ಯರೂಪಕ ಪ್ರೇಕ್ಷಕರ ಮನಗೆದ್ದಿತು.

ಶಾಸಕ ಕೆ.ಎಂ. ಉದಯ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಶಾಸಕ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಕುಮಾರ್, ಜಿ.ಪಂ. ಸಿಇಒ ಕೆ.ಆರ್.ನಂದಿನಿ, ಮೈಶುಗರ್ ಅಧ್ಯಕ್ಷ ಸಿ ಡಿ ಗಂಗಾಧರ್, ತಹಶೀಲ್ದಾರ್ ಉಪಸ್ಥಿತರಿದ್ದರು.

Tags:
error: Content is protected !!