ಮಂಡ್ಯ : ಹಿಂದೂಗಳ ಸಂಘಟನೆಯೇ ನನ್ನ ಗುರಿ. ಹಿಂದೂಗಳ ಪರವಾಗಿ ಗಟ್ಟಿಧ್ವನಿ ಬೇಕಾಗಿದೆ. ಅದಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಬಿಜೆಪಿ ಅಸ್ತಿತ್ವವೇ ಇಲ್ಲದ ಮಂಡ್ಯದಲ್ಲಿ ಇಷ್ಟು ಜನರು ಸೇರಿದ್ದು ಹಿಂದುತ್ವದ ಸಲುವಾಗಿ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಣೇಶ ಮೂರ್ತಿ ಮೆರವಣಿಗೆ ಮೇಲೆ ಕಲ್ಲು ತೂರಿದ ಘಟನೆಯಿಂದಾಗಿ ಹಿಂದೂಗಳಲ್ಲಿ ಜಾಗೃತಿಯಾಗಿದೆ. ಶೇ.೪ರಷ್ಟು ಇದ್ದವರು ಶೇ.೩೦-೪೦ರಷ್ಟಾದರೆ ನಮ್ಮ ಗತಿ ಏನೆಂಬ ಭಾವನೆ ಹಿಂದೂಗಳಲ್ಲಿ ಮೂಡಿದೆ. ಸನಾತನ ಧರ್ಮದ ರಕ್ಷಣೆಯಾಗಬೇಕು ಎಂದರು.
ಇದನ್ನು ಓದಿ : ಕಲ್ಲು ತೂರಾಟ ಯಾರೇ ಮಾಡಿದ್ದರೂ ಖಂಡನೀಯ, ಶಿಕ್ಷಾರ್ಹ ಅಪರಾಧ: ಸಚಿವ ಎಚ್ಸಿಎಂ
ಮಂಡ್ಯದಲ್ಲಿ ಹಿಂದೂಗಳು ಹೆಚ್ಚು ಜಾಗೃತಿಗೊಳ್ಳುತ್ತಿದ್ದಾರೆ. ರಾಜ್ಯದ ಮೂಲೆ ಮೂಲೆ ಪ್ರವಾಸ ಮಾಡುತ್ತಿದ್ದೇನೆ. ಎಲ್ಲೆಡೆ ಮಂಡ್ಯವನ್ನು ಉದಾಹರಣೆ ಕೊಡುತ್ತಿದ್ದೇನೆ. ಹಿಂದೂ ದೇವಾಲಯಗಳಲ್ಲಿ ಶಸ್ತ್ರಾಸ್ತ್ರ ಸಿಗುವುದಿಲ್ಲ. ರಂಜಾನ್, ಈದ್ ಮಿಲಾದ್ ಮೆರವಣಿಗೆ ಮೇಲೆ ಹಿಂದೂಗಳು ಕಲ್ಲು ಎಸೆಯಲ್ಲ. ಆದರೆ, ನಾಗಮಂಗಲ, ಮದ್ದೂರಿನಲ್ಲಿ ಮುಸ್ಲಿಮರು ಗಣೇಶ ಮೆರವಣಿಗೆ ಮೇಲೆ ಕಲ್ಲು ಎಸೆದರು. ಇದರಿಂದಾಗಿ ಹಿಂದೂ ಸಮುದಾಯ ಜಾಗೃತಿಯಾಗುತ್ತಿದೆ ಎಂದರು.
ಬಿಜೆಪಿ ಸರ್ಕಾರ ಹಿಂದೂಗಳ ಮೇಲಿನ ಕೇಸ್ ವಾಪಸ್ ಪಡೆದಿರಲಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ ಮುಸ್ಲಿಂ ಗೂಂಡಾಗಳ ಮೇಲಿದ್ದ ಕೇಸ್ ವಾಪಾಸು ಪಡೆಯಿತು. ಕಾಂಗ್ರೆಸ್ ಸರ್ಕಾರ ಗಣೇಶೋತ್ಸವ ವೇಳೆ ಡಿಜೆ ಬ್ಯಾನ್ ಮಾಡಿದೆ. ಡಿಜೆ ನಿಷೇಧ ವಿಚಾರದಲ್ಲಿ ಒಂದು ಜಿಲ್ಲೆಗೆ ಒಂದೊಂದು ಕಾನೂನು. ದಿನಕ್ಕೆ ಐದು ಸಲ ಮಸೀದಿಯಲ್ಲಿ ಧ್ವನಿವರ್ಧಕ ಹಾಕುತ್ತಾರೆ. ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಧ್ವನಿವರ್ಧಕ ಬಳಸುತ್ತಿದ್ದಾರೆಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಬಜರಂಗ ಸೇನೆ ರಾಜ್ಯಾಧ್ಯಕ್ಷ ಬಿ.ಮಂಜುನಾಥ್ ಹಾಜರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…