ಮಂಡ್ಯ

ಗಣೇಶ ಮೂರ್ತಿ ಮೇಲೆ ಕಲ್ಲು ತೂರಿದ ಘಟನೆಯಿಂದಾಗಿ ಹಿಂದೂಗಳಲ್ಲಿ ಜಾಗೃತಿ: ಯತ್ನಾಳ್

ಮಂಡ್ಯ : ಹಿಂದೂಗಳ ಸಂಘಟನೆಯೇ ನನ್ನ ಗುರಿ. ಹಿಂದೂಗಳ ಪರವಾಗಿ ಗಟ್ಟಿಧ್ವನಿ ಬೇಕಾಗಿದೆ. ಅದಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಬಿಜೆಪಿ ಅಸ್ತಿತ್ವವೇ ಇಲ್ಲದ ಮಂಡ್ಯದಲ್ಲಿ ಇಷ್ಟು ಜನರು ಸೇರಿದ್ದು ಹಿಂದುತ್ವದ ಸಲುವಾಗಿ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಣೇಶ ಮೂರ್ತಿ ಮೆರವಣಿಗೆ ಮೇಲೆ ಕಲ್ಲು ತೂರಿದ ಘಟನೆಯಿಂದಾಗಿ ಹಿಂದೂಗಳಲ್ಲಿ ಜಾಗೃತಿಯಾಗಿದೆ. ಶೇ.೪ರಷ್ಟು ಇದ್ದವರು ಶೇ.೩೦-೪೦ರಷ್ಟಾದರೆ ನಮ್ಮ ಗತಿ ಏನೆಂಬ ಭಾವನೆ ಹಿಂದೂಗಳಲ್ಲಿ ಮೂಡಿದೆ. ಸನಾತನ ಧರ್ಮದ ರಕ್ಷಣೆಯಾಗಬೇಕು ಎಂದರು.

ಇದನ್ನು ಓದಿ :  ಕಲ್ಲು ತೂರಾಟ ಯಾರೇ ಮಾಡಿದ್ದರೂ ಖಂಡನೀಯ, ಶಿಕ್ಷಾರ್ಹ ಅಪರಾಧ: ಸಚಿವ ಎಚ್‌ಸಿಎಂ

ಮಂಡ್ಯದಲ್ಲಿ ಹಿಂದೂಗಳು ಹೆಚ್ಚು ಜಾಗೃತಿಗೊಳ್ಳುತ್ತಿದ್ದಾರೆ. ರಾಜ್ಯದ ಮೂಲೆ ಮೂಲೆ ಪ್ರವಾಸ ಮಾಡುತ್ತಿದ್ದೇನೆ. ಎಲ್ಲೆಡೆ ಮಂಡ್ಯವನ್ನು ಉದಾಹರಣೆ ಕೊಡುತ್ತಿದ್ದೇನೆ. ಹಿಂದೂ ದೇವಾಲಯಗಳಲ್ಲಿ ಶಸ್ತ್ರಾಸ್ತ್ರ ಸಿಗುವುದಿಲ್ಲ. ರಂಜಾನ್, ಈದ್ ಮಿಲಾದ್ ಮೆರವಣಿಗೆ ಮೇಲೆ ಹಿಂದೂಗಳು ಕಲ್ಲು ಎಸೆಯಲ್ಲ. ಆದರೆ, ನಾಗಮಂಗಲ, ಮದ್ದೂರಿನಲ್ಲಿ ಮುಸ್ಲಿಮರು ಗಣೇಶ ಮೆರವಣಿಗೆ ಮೇಲೆ ಕಲ್ಲು ಎಸೆದರು. ಇದರಿಂದಾಗಿ ಹಿಂದೂ ಸಮುದಾಯ ಜಾಗೃತಿಯಾಗುತ್ತಿದೆ ಎಂದರು.

ಬಿಜೆಪಿ ಸರ್ಕಾರ ಹಿಂದೂಗಳ ಮೇಲಿನ ಕೇಸ್ ವಾಪಸ್ ಪಡೆದಿರಲಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ ಮುಸ್ಲಿಂ ಗೂಂಡಾಗಳ ಮೇಲಿದ್ದ ಕೇಸ್ ವಾಪಾಸು ಪಡೆಯಿತು. ಕಾಂಗ್ರೆಸ್ ಸರ್ಕಾರ ಗಣೇಶೋತ್ಸವ ವೇಳೆ ಡಿಜೆ ಬ್ಯಾನ್ ಮಾಡಿದೆ. ಡಿಜೆ ನಿಷೇಧ ವಿಚಾರದಲ್ಲಿ ಒಂದು ಜಿಲ್ಲೆಗೆ ಒಂದೊಂದು ಕಾನೂನು. ದಿನಕ್ಕೆ ಐದು ಸಲ ಮಸೀದಿಯಲ್ಲಿ ಧ್ವನಿವರ್ಧಕ ಹಾಕುತ್ತಾರೆ. ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಧ್ವನಿವರ್ಧಕ ಬಳಸುತ್ತಿದ್ದಾರೆಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಬಜರಂಗ ಸೇನೆ ರಾಜ್ಯಾಧ್ಯಕ್ಷ ಬಿ.ಮಂಜುನಾಥ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

41 seconds ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

5 mins ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

11 mins ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

17 mins ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

10 hours ago