ಮಂಡ್ಯ : ಹಿಂದೂಗಳ ಸಂಘಟನೆಯೇ ನನ್ನ ಗುರಿ. ಹಿಂದೂಗಳ ಪರವಾಗಿ ಗಟ್ಟಿಧ್ವನಿ ಬೇಕಾಗಿದೆ. ಅದಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಬಿಜೆಪಿ ಅಸ್ತಿತ್ವವೇ ಇಲ್ಲದ ಮಂಡ್ಯದಲ್ಲಿ ಇಷ್ಟು ಜನರು ಸೇರಿದ್ದು ಹಿಂದುತ್ವದ ಸಲುವಾಗಿ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಣೇಶ ಮೂರ್ತಿ ಮೆರವಣಿಗೆ ಮೇಲೆ ಕಲ್ಲು ತೂರಿದ ಘಟನೆಯಿಂದಾಗಿ ಹಿಂದೂಗಳಲ್ಲಿ ಜಾಗೃತಿಯಾಗಿದೆ. ಶೇ.೪ರಷ್ಟು ಇದ್ದವರು ಶೇ.೩೦-೪೦ರಷ್ಟಾದರೆ ನಮ್ಮ ಗತಿ ಏನೆಂಬ ಭಾವನೆ ಹಿಂದೂಗಳಲ್ಲಿ ಮೂಡಿದೆ. ಸನಾತನ ಧರ್ಮದ ರಕ್ಷಣೆಯಾಗಬೇಕು ಎಂದರು.
ಇದನ್ನು ಓದಿ : ಕಲ್ಲು ತೂರಾಟ ಯಾರೇ ಮಾಡಿದ್ದರೂ ಖಂಡನೀಯ, ಶಿಕ್ಷಾರ್ಹ ಅಪರಾಧ: ಸಚಿವ ಎಚ್ಸಿಎಂ
ಮಂಡ್ಯದಲ್ಲಿ ಹಿಂದೂಗಳು ಹೆಚ್ಚು ಜಾಗೃತಿಗೊಳ್ಳುತ್ತಿದ್ದಾರೆ. ರಾಜ್ಯದ ಮೂಲೆ ಮೂಲೆ ಪ್ರವಾಸ ಮಾಡುತ್ತಿದ್ದೇನೆ. ಎಲ್ಲೆಡೆ ಮಂಡ್ಯವನ್ನು ಉದಾಹರಣೆ ಕೊಡುತ್ತಿದ್ದೇನೆ. ಹಿಂದೂ ದೇವಾಲಯಗಳಲ್ಲಿ ಶಸ್ತ್ರಾಸ್ತ್ರ ಸಿಗುವುದಿಲ್ಲ. ರಂಜಾನ್, ಈದ್ ಮಿಲಾದ್ ಮೆರವಣಿಗೆ ಮೇಲೆ ಹಿಂದೂಗಳು ಕಲ್ಲು ಎಸೆಯಲ್ಲ. ಆದರೆ, ನಾಗಮಂಗಲ, ಮದ್ದೂರಿನಲ್ಲಿ ಮುಸ್ಲಿಮರು ಗಣೇಶ ಮೆರವಣಿಗೆ ಮೇಲೆ ಕಲ್ಲು ಎಸೆದರು. ಇದರಿಂದಾಗಿ ಹಿಂದೂ ಸಮುದಾಯ ಜಾಗೃತಿಯಾಗುತ್ತಿದೆ ಎಂದರು.
ಬಿಜೆಪಿ ಸರ್ಕಾರ ಹಿಂದೂಗಳ ಮೇಲಿನ ಕೇಸ್ ವಾಪಸ್ ಪಡೆದಿರಲಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ ಮುಸ್ಲಿಂ ಗೂಂಡಾಗಳ ಮೇಲಿದ್ದ ಕೇಸ್ ವಾಪಾಸು ಪಡೆಯಿತು. ಕಾಂಗ್ರೆಸ್ ಸರ್ಕಾರ ಗಣೇಶೋತ್ಸವ ವೇಳೆ ಡಿಜೆ ಬ್ಯಾನ್ ಮಾಡಿದೆ. ಡಿಜೆ ನಿಷೇಧ ವಿಚಾರದಲ್ಲಿ ಒಂದು ಜಿಲ್ಲೆಗೆ ಒಂದೊಂದು ಕಾನೂನು. ದಿನಕ್ಕೆ ಐದು ಸಲ ಮಸೀದಿಯಲ್ಲಿ ಧ್ವನಿವರ್ಧಕ ಹಾಕುತ್ತಾರೆ. ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಧ್ವನಿವರ್ಧಕ ಬಳಸುತ್ತಿದ್ದಾರೆಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಬಜರಂಗ ಸೇನೆ ರಾಜ್ಯಾಧ್ಯಕ್ಷ ಬಿ.ಮಂಜುನಾಥ್ ಹಾಜರಿದ್ದರು.
ಟಿ.ನರಸೀಪುರ: ಡೆತ್ನೋಟ್ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…
ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…
ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…
ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…
ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…
ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…