ಮಂಡ್ಯ

ಗಣೇಶ ಮೂರ್ತಿ ಮೇಲೆ ಕಲ್ಲು ತೂರಿದ ಘಟನೆಯಿಂದಾಗಿ ಹಿಂದೂಗಳಲ್ಲಿ ಜಾಗೃತಿ: ಯತ್ನಾಳ್

ಮಂಡ್ಯ : ಹಿಂದೂಗಳ ಸಂಘಟನೆಯೇ ನನ್ನ ಗುರಿ. ಹಿಂದೂಗಳ ಪರವಾಗಿ ಗಟ್ಟಿಧ್ವನಿ ಬೇಕಾಗಿದೆ. ಅದಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಬಿಜೆಪಿ ಅಸ್ತಿತ್ವವೇ ಇಲ್ಲದ ಮಂಡ್ಯದಲ್ಲಿ ಇಷ್ಟು ಜನರು ಸೇರಿದ್ದು ಹಿಂದುತ್ವದ ಸಲುವಾಗಿ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಣೇಶ ಮೂರ್ತಿ ಮೆರವಣಿಗೆ ಮೇಲೆ ಕಲ್ಲು ತೂರಿದ ಘಟನೆಯಿಂದಾಗಿ ಹಿಂದೂಗಳಲ್ಲಿ ಜಾಗೃತಿಯಾಗಿದೆ. ಶೇ.೪ರಷ್ಟು ಇದ್ದವರು ಶೇ.೩೦-೪೦ರಷ್ಟಾದರೆ ನಮ್ಮ ಗತಿ ಏನೆಂಬ ಭಾವನೆ ಹಿಂದೂಗಳಲ್ಲಿ ಮೂಡಿದೆ. ಸನಾತನ ಧರ್ಮದ ರಕ್ಷಣೆಯಾಗಬೇಕು ಎಂದರು.

ಇದನ್ನು ಓದಿ :  ಕಲ್ಲು ತೂರಾಟ ಯಾರೇ ಮಾಡಿದ್ದರೂ ಖಂಡನೀಯ, ಶಿಕ್ಷಾರ್ಹ ಅಪರಾಧ: ಸಚಿವ ಎಚ್‌ಸಿಎಂ

ಮಂಡ್ಯದಲ್ಲಿ ಹಿಂದೂಗಳು ಹೆಚ್ಚು ಜಾಗೃತಿಗೊಳ್ಳುತ್ತಿದ್ದಾರೆ. ರಾಜ್ಯದ ಮೂಲೆ ಮೂಲೆ ಪ್ರವಾಸ ಮಾಡುತ್ತಿದ್ದೇನೆ. ಎಲ್ಲೆಡೆ ಮಂಡ್ಯವನ್ನು ಉದಾಹರಣೆ ಕೊಡುತ್ತಿದ್ದೇನೆ. ಹಿಂದೂ ದೇವಾಲಯಗಳಲ್ಲಿ ಶಸ್ತ್ರಾಸ್ತ್ರ ಸಿಗುವುದಿಲ್ಲ. ರಂಜಾನ್, ಈದ್ ಮಿಲಾದ್ ಮೆರವಣಿಗೆ ಮೇಲೆ ಹಿಂದೂಗಳು ಕಲ್ಲು ಎಸೆಯಲ್ಲ. ಆದರೆ, ನಾಗಮಂಗಲ, ಮದ್ದೂರಿನಲ್ಲಿ ಮುಸ್ಲಿಮರು ಗಣೇಶ ಮೆರವಣಿಗೆ ಮೇಲೆ ಕಲ್ಲು ಎಸೆದರು. ಇದರಿಂದಾಗಿ ಹಿಂದೂ ಸಮುದಾಯ ಜಾಗೃತಿಯಾಗುತ್ತಿದೆ ಎಂದರು.

ಬಿಜೆಪಿ ಸರ್ಕಾರ ಹಿಂದೂಗಳ ಮೇಲಿನ ಕೇಸ್ ವಾಪಸ್ ಪಡೆದಿರಲಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ ಮುಸ್ಲಿಂ ಗೂಂಡಾಗಳ ಮೇಲಿದ್ದ ಕೇಸ್ ವಾಪಾಸು ಪಡೆಯಿತು. ಕಾಂಗ್ರೆಸ್ ಸರ್ಕಾರ ಗಣೇಶೋತ್ಸವ ವೇಳೆ ಡಿಜೆ ಬ್ಯಾನ್ ಮಾಡಿದೆ. ಡಿಜೆ ನಿಷೇಧ ವಿಚಾರದಲ್ಲಿ ಒಂದು ಜಿಲ್ಲೆಗೆ ಒಂದೊಂದು ಕಾನೂನು. ದಿನಕ್ಕೆ ಐದು ಸಲ ಮಸೀದಿಯಲ್ಲಿ ಧ್ವನಿವರ್ಧಕ ಹಾಕುತ್ತಾರೆ. ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಧ್ವನಿವರ್ಧಕ ಬಳಸುತ್ತಿದ್ದಾರೆಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಬಜರಂಗ ಸೇನೆ ರಾಜ್ಯಾಧ್ಯಕ್ಷ ಬಿ.ಮಂಜುನಾಥ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

36 mins ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

38 mins ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

41 mins ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

43 mins ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

47 mins ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

52 mins ago