ಮಂಡ್ಯ

ಶಿಕ್ಷಣ ಕ್ಷೇತ್ರಕ್ಕೆ ನೀಡುವ ಅನುದಾನ ಹೆಚ್ಚಿಸಿ : ಇಂಡುವಾಳು ಸಚ್ಚಿದಾನಂದ ಒತ್ತಾಯ

ಶ್ರೀರಂಗಪಟ್ಟಣ : ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ನೀಡುವ ಅನುದಾನವನ್ನು ಮತ್ತಷ್ಟು ಹೆಚ್ಚಿಸಬೇಕೆಂದು ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಒತ್ತಾಯಿಸಿದರು.

ತಾಲ್ಲೂಕಿನ ಕೊಡಿಯಾಲ ಗ್ರಾಮದಲ್ಲಿ ಎನ್.ಶಂಕರೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ, ೨೦೨೫-೨೬ನೇ ಸಾಲಿನಲ್ಲಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದಿರುವ ಗ್ರಾಮದ ಬಳ್ಳಾರಿಗೌಡ ಮತ್ತು ಜಿ.ಪಿ.ಸುಧಾ ಅವರ ಪುತ್ರಿ ಕೆ.ಬಿ.ಧನ್ಯಶ್ರೀ ಅವರಿಗೆ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದರು.

ರಾಜ್ಯದಲ್ಲಿ ಸರ್ಕಾರಿ ಶಾಲೆ, ಕಾಲೇಜು ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ. ಪ್ರಯೋಗಶಾಲೆ, ಗ್ರಂಥಾಲಯ ಸೌಲಭ್ಯ ಕೂಡ ಸರಿಯಾಗಿಲ್ಲ. ಶಿಕ್ಷಕರು ಮತ್ತು ಉಪನ್ಯಾಸಕರ ಕೊರತೆಯೂ ಕಾಡುತ್ತಿದೆ. ಇದು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಡಕಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಶಿಕ್ಷಣ ತಜ್ಞರ ಸಮಿತಿ ರಚಿಸಿ, ವಸ್ತುನಿಷ್ಠ ವರದಿ ಪಡೆಯಬೇಕು. ಸರ್ಕಾರಿ ಶಿಕ್ಷಣ ಸಂಸ್ಥೆಗಳ ಸಬಲೀಕರಣಕ್ಕೆ ಕ್ರಮ ವಹಿಸಬೇಕೆಂದು ಮನವಿ ಮಾಡಿದರು.

ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ನೀಡಲಾಗುತ್ತಿದೆ. ಅಂತಹ ವಿದ್ಯಾರ್ಥಿಗಳು ಖುದ್ದು ಸಂಪರ್ಕಿಸಿದರೆ ಅವರ ಮನೆ ಬಾಗಿಲಿಗೆ ತೆರಳಿ ಲ್ಯಾಪ್‌ಟಾಪ್ ವಿತರಿಸಲಾಗುವುದು ಎಂದು ಸಚ್ಚಿದಾನಂದ ತಿಳಿಸಿದರು.

ಬಿಜೆಪಿ ಮಂಡಲದ ಅಧ್ಯಕ್ಷ ಪೀಹಳ್ಳಿ ಎಸ್.ರಮೇಶ್ ಮಾತನಾಡಿ, ಸಚ್ಚಿದಾನಂದ ಅವರು ತಮ್ಮ ತಂದೆ ಎನ್.ಶಂಕರೇಗೌಡ ಚಾರಿಟಬಲ್ ಟ್ರಸ್ಟ್ ಹೆಸರಿನಲ್ಲಿ ನಿರಂತರವಾಗಿ ಜನಪರ ಸೇವೆ ಮಾಡಿಕೊಂಡು ಬಂದಿದ್ದು, ಅವರು ಕೋವಿಡ್ ಸಂದರ್ಭದಿಂದಲೂ ಜನರ ಕಷ್ಟಕ್ಕೆ ಭಾಗಿ ಆಗಿರುತ್ತಾರೆ ಎಂದರು.

ಈ ವೇಳೆ ಉಪಾಧ್ಯಕ್ಷ ಮೊಳ್ಳೇನಹಳ್ಳಿ ಚಂದ್ರು, ಅರಕೆರೆ ಹೋಬಳಿ ಘಟಕದ ಅಧ್ಯಕ್ಷ ಕಶ್ಯಪ್, ಮುಖಂಡರಾದ ಸಿದ್ದರಾಜು, ಸಚಿನ್, ಕೆ.ಬಿ.ಶಿವಕುಮಾರ್, ಪುಟ್ಟೇಗೌಡ, ಮೋಹನ್, ಜಗದೀಶ್, ಅಭಿ, ಪ್ರಭಾಕರ್, ಮುರಳಿ, ಶ್ಯಾಮ್, ಚೊಟ್ಟನಹಳ್ಳಿ ಗೋವಿಂದು, ದರ್ಶನ್, ಚಿಕ್ಕ ಹಾರೋಹಳ್ಳಿ ಮಂಜು, ಕೆ.ಬಿ.ಕುಮಾರ್, ದೇವೇಗೌಡ, ಶ್ರೀಧರ್, ಬುದ್ದಿ, ಉಮೇಶ್, ಜವರೇಗೌಡ ಇತರರಿದ್ದರು.

ಆಂದೋಲನ ಡೆಸ್ಕ್

Recent Posts

ಮತ್ತೆ ಚಿಗುರೊಡೆದ ಎಂಡಿಎ ಹೊಸ ಬಡಾವಣೆಯ ಕನಸು

ಅಧಿಕಾರಿಗಳ ಮನವೊಲಿಕೆಗೆ ಸಮ್ಮತಿಸುತ್ತಿರುವ ಭೂ ಮಾಲೀಕರು ಕೆ.ಬಿ.ರಮೇಶನಾಯಕ ಮೈಸೂರು : ದಶಕಗಳಿಂದಲೂ ಬಡ-ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಲು,…

7 mins ago

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

11 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

11 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

12 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

12 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

12 hours ago