ಮಂಡ್ಯ

ಶಿಕ್ಷಣ ಕ್ಷೇತ್ರಕ್ಕೆ ನೀಡುವ ಅನುದಾನ ಹೆಚ್ಚಿಸಿ : ಇಂಡುವಾಳು ಸಚ್ಚಿದಾನಂದ ಒತ್ತಾಯ

ಶ್ರೀರಂಗಪಟ್ಟಣ : ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ನೀಡುವ ಅನುದಾನವನ್ನು ಮತ್ತಷ್ಟು ಹೆಚ್ಚಿಸಬೇಕೆಂದು ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಒತ್ತಾಯಿಸಿದರು.

ತಾಲ್ಲೂಕಿನ ಕೊಡಿಯಾಲ ಗ್ರಾಮದಲ್ಲಿ ಎನ್.ಶಂಕರೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ, ೨೦೨೫-೨೬ನೇ ಸಾಲಿನಲ್ಲಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದಿರುವ ಗ್ರಾಮದ ಬಳ್ಳಾರಿಗೌಡ ಮತ್ತು ಜಿ.ಪಿ.ಸುಧಾ ಅವರ ಪುತ್ರಿ ಕೆ.ಬಿ.ಧನ್ಯಶ್ರೀ ಅವರಿಗೆ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದರು.

ರಾಜ್ಯದಲ್ಲಿ ಸರ್ಕಾರಿ ಶಾಲೆ, ಕಾಲೇಜು ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ. ಪ್ರಯೋಗಶಾಲೆ, ಗ್ರಂಥಾಲಯ ಸೌಲಭ್ಯ ಕೂಡ ಸರಿಯಾಗಿಲ್ಲ. ಶಿಕ್ಷಕರು ಮತ್ತು ಉಪನ್ಯಾಸಕರ ಕೊರತೆಯೂ ಕಾಡುತ್ತಿದೆ. ಇದು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಡಕಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಶಿಕ್ಷಣ ತಜ್ಞರ ಸಮಿತಿ ರಚಿಸಿ, ವಸ್ತುನಿಷ್ಠ ವರದಿ ಪಡೆಯಬೇಕು. ಸರ್ಕಾರಿ ಶಿಕ್ಷಣ ಸಂಸ್ಥೆಗಳ ಸಬಲೀಕರಣಕ್ಕೆ ಕ್ರಮ ವಹಿಸಬೇಕೆಂದು ಮನವಿ ಮಾಡಿದರು.

ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ನೀಡಲಾಗುತ್ತಿದೆ. ಅಂತಹ ವಿದ್ಯಾರ್ಥಿಗಳು ಖುದ್ದು ಸಂಪರ್ಕಿಸಿದರೆ ಅವರ ಮನೆ ಬಾಗಿಲಿಗೆ ತೆರಳಿ ಲ್ಯಾಪ್‌ಟಾಪ್ ವಿತರಿಸಲಾಗುವುದು ಎಂದು ಸಚ್ಚಿದಾನಂದ ತಿಳಿಸಿದರು.

ಬಿಜೆಪಿ ಮಂಡಲದ ಅಧ್ಯಕ್ಷ ಪೀಹಳ್ಳಿ ಎಸ್.ರಮೇಶ್ ಮಾತನಾಡಿ, ಸಚ್ಚಿದಾನಂದ ಅವರು ತಮ್ಮ ತಂದೆ ಎನ್.ಶಂಕರೇಗೌಡ ಚಾರಿಟಬಲ್ ಟ್ರಸ್ಟ್ ಹೆಸರಿನಲ್ಲಿ ನಿರಂತರವಾಗಿ ಜನಪರ ಸೇವೆ ಮಾಡಿಕೊಂಡು ಬಂದಿದ್ದು, ಅವರು ಕೋವಿಡ್ ಸಂದರ್ಭದಿಂದಲೂ ಜನರ ಕಷ್ಟಕ್ಕೆ ಭಾಗಿ ಆಗಿರುತ್ತಾರೆ ಎಂದರು.

ಈ ವೇಳೆ ಉಪಾಧ್ಯಕ್ಷ ಮೊಳ್ಳೇನಹಳ್ಳಿ ಚಂದ್ರು, ಅರಕೆರೆ ಹೋಬಳಿ ಘಟಕದ ಅಧ್ಯಕ್ಷ ಕಶ್ಯಪ್, ಮುಖಂಡರಾದ ಸಿದ್ದರಾಜು, ಸಚಿನ್, ಕೆ.ಬಿ.ಶಿವಕುಮಾರ್, ಪುಟ್ಟೇಗೌಡ, ಮೋಹನ್, ಜಗದೀಶ್, ಅಭಿ, ಪ್ರಭಾಕರ್, ಮುರಳಿ, ಶ್ಯಾಮ್, ಚೊಟ್ಟನಹಳ್ಳಿ ಗೋವಿಂದು, ದರ್ಶನ್, ಚಿಕ್ಕ ಹಾರೋಹಳ್ಳಿ ಮಂಜು, ಕೆ.ಬಿ.ಕುಮಾರ್, ದೇವೇಗೌಡ, ಶ್ರೀಧರ್, ಬುದ್ದಿ, ಉಮೇಶ್, ಜವರೇಗೌಡ ಇತರರಿದ್ದರು.

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

7 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

7 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

9 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

9 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

9 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

17 hours ago