ಮಂಡ್ಯ

ಜಿಲ್ಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಯೂನಿಟ್ ಹೆಚ್ಚುಗೊಳಿಸಿ : ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಇರುವ ಸರ್ಕಾರಿ  ಮತ್ತು ಖಾಸಗಿ  ವಸತಿ ಶಾಲೆಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಯೂನಿಟ್ ಪ್ರಾರಂಭಿಸಿ ತರಬೇತಿ ನೀಡಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ  ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಯನ್ನು ಕುರಿತು ಮಾತನಾಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ನಿರ್ವಹಿಸುವ ಕೆಲಸಗಳು ಮಕ್ಕಳಲ್ಲಿ ಶಿಸ್ತು ಹಾಗೂ ಸೇವಾ ಮನೋಭಾವ ಬೆಳೆಸುತ್ತದೆ. ಪೋಷಕರು ತಮ್ಮ ಮಕ್ಕಳನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಯೂನಿಟ್ ಗೆ ಸೇರಿಸಿ ತರಬೇತಿ ಕೊಡಿಸಿ ಎಂದು ಹೇಳಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದರೆ ಆಗುವ ಅನುಕೂಲತೆಗಳ ಬಗ್ಗೆ ಮಕ್ಕಳಿಗೆ ತಿಳಿಸಿ ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ನೊಂದಣಿಯಾಗುವಂತೆ ಪ್ರೆರೇಪಿಸಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ಬಗ್ಗೆ ಶಾಲೆಯಲ್ಲಿ ಹೆಚ್ಚು ಪ್ರದರ್ಶನ ಗಳನ್ನು ಏರ್ಪಡಿಸಿ ಚಟುವಟಿಕೆಗಳನ್ನು ಹೆಚ್ಚಾಗಿ ಮಾಡಿಸಬೇಕು, ಇದರ ಜೊತೆಗೆ ಶಿಕ್ಷಕರು ಕೂಡ ಭಾಗಿಯಾಗಬೇಕು ಎಂದು ತಿಳಿಸಿದರು.

ವಸತಿ ಶಾಲೆಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಯೂನಿಟ್ ಜಿಲ್ಲೆಯಲ್ಲಿರುವ ವಸತಿ ಶಾಲೆಗಳಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ನ ಯೂನಿಟ್ ಆರಂಭಿಸಬೇಕು. ಮಕ್ಕಳೇ ದೇಶದ ಮುಂದಿನ ಆಸ್ತಿ‌. ಮಕ್ಕಳಿಂದ ದೇಶಕ್ಕೆ ಒಳಿತಾಗಬೇಕು ಎಂದರೆ ಅವರಿಗೆ ಶಿಸ್ತು, ಮೌಲ್ಯಯುತ ಮತ್ತು ಸಮಾಜಮುಖಿ ಕೆಲಸಗಳನ್ನು ಚಿಕ್ಕ ವಯಸ್ಸಿನಿಂದಲೇ ಅಭ್ಯಾಸ ಮಾಡಿಸಬೇಕು ಎಂದು ಹೇಳಿದರು.

ಕನ್ನಡ ಅಥವಾ ಸಮಾಜ ವಿಜ್ಞಾನದ ಶಿಕ್ಷಕರಿಗೆ ಸ್ಕೌಟ್ಸ್ ಮತ್ತು  ಗೈಡ್ಸ್ ನ ಬಗ್ಗೆ ತರಬೇತಿ ಕೊಡಿಸಿ ಅವರ ಮೂಲಕ ಮಕ್ಕಳಿಗೆ ಇದರ ಅರಿವು ಮೂಡಿಸ, ಚಟುವಟಿಕೆ ಚುರುಕುಗೊಳಿಸುವುದ ಮುಖಾಂತರ ಅವರನ್ನು ಪ್ರೇರೇಪಿಸಬೇಕು ಎಂದು ಹೇಳಿದರು.

ಖಾಸಗಿ ಶಾಲೆಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿಲ್ಲ ಎಂಬ ದೂರುಗಳು ಬರುತ್ತಿವೆ ಇದರ ಬಗ್ಗೆ ಖಾಸಗಿ ಶಾಲೆಯ ಪ್ರಾಂಶುಪಾಲರುಗಳು ಗಮನಹರಿಸಿ ಯೂನಿಟ್ ಪ್ರಾರಂಭ ಮಾಡಿ. ಇದರಿಂದ ಮಕ್ಕಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್ ಮಾತನಾಡಿ,  ಎಚ್ ಮಲ್ಲಿಗೆರೆಯಲ್ಲಿರುವ ಸರ್ಕಾರಿ ಜಾಗದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ತರಬೇತಿ ಕೇಂದ್ರ ಮಾಡಿ ಕ್ಯಾಂಪಸ್ ತೆರೆಯಬೇಕು ಎಂಬ ಉದ್ದೇಶದಿಂದ 2 ಎಕರೆ ಜಮೀನು ಕೊಡಬೇಕೆಂದು ಮನವಿ ಸಲ್ಲಿಸಲಾಗಿದ್ದು, ಜಿಲ್ಲಾಡಳಿತವು ಇದಕ್ಕೆ ಸಹಕಾರ ನೀಡಿದೆ ಅದಕ್ಕೆ ಬೇಕಾದಂತಹ ದಾಖಲೆಗಳನ್ನು ಸಿದ್ದಪಡಿಸಿಕೊಳ್ಳಬೇಕಿದೆ ಎಂದರು.

ಸಭೆಯಲ್ಲಿ ಆಯುಷ್ ಇಲಾಖೆಯ ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ. ಸೀತಾ ಲಕ್ಷ್ಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಚಂದ್ರಕಾಂತ, ಭಾರತ್ ಸ್ಕೌಟ್ಸ್ ಗೈಡ್ ನ ಜಿಲ್ಲಾ ಮುಖ್ಯ ಆಯುಕ್ತರಾದ ಭಕ್ತ ವತ್ಸಲ, (ಗೈಡ್) ಜಿಲ್ಲಾ ಆಯುಕ್ತ ರಾದ ಕೆ.ಸಿ. ನಾಗಮ್ಮ, (ಸ್ಕೌಟ್) ಡಾ.ಅನಿಲ್ ಕುಮಾರ್, ಕೇಂದ್ರ ಸ್ಥಾನಿಕ ಆಯುಕ್ತರಾದ ನಾಗರೇವಕ್ಕ, ಖಜಾಂಚಿ ಹೆಚ್.ವಿ.ಜಯರಾಂ, ಕಾರ್ಯದರ್ಶಿ ಶಿವರಾಮೇಗೌಡ, ಜಂಟಿ ಕಾರ್ಯದರ್ಶಿ ಪದ್ಮಾವತಿ, ಮಂಡ್ಯ ದಕ್ಷಿಣ ವಲಯ ಸ್ಥಳೀಯ ಕಾರ್ಯದರ್ಶಿ ಸೌಮ್ಯಲತ, ಶ್ರೀ ರಂಗ ಪಟ್ಟಣ ತಾಲ್ಲೂಕು ಜಂಟಿ ಕಾರ್ಯದರ್ಶಿ ಮತ್ತು ಅಜೀವ ಸದಸ್ಯರು ಮಂಜುಳ, ಅಜೀವ ಸದಸ್ಯರುಗಳಾದ ಚಂದ್ರಕಲಾ, ಸುಜಾತಮಣಿ, ಚಂದ್ರು, ಗಾಯಿತ್ರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

4 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

4 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

5 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

6 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

6 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

7 hours ago